Webdunia - Bharat's app for daily news and videos

Install App

ಅಪ್ಪ ಮಕ್ಕಳ ಪಕ್ಷ ಎಂದು ಟೀಕಿಸಿದವರಿಗೆ ಸ್ಪಷ್ಟನೆ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

Webdunia
ಭಾನುವಾರ, 6 ಮೇ 2018 (08:04 IST)
ಚಿಕ್ಕಮಂಗಳೂರು : ಅಪ್ಪ ಮಕ್ಕಳ ಪಕ್ಷ ಎಂದು ಹಲವರು ಟೀಕೆ ಮಾಡಿರುವುದಕ್ಕೆ ಇದೀಗ ಮಾಜಿ ಪ್ರಧಾನಿ ದೇವೇಗೌಡರು ನನ್ನ ಮಗನನ್ನ ಮುಖ್ಯಮಂತ್ರಿ ಮಾಡಬೇಕು ಎಂದ್ದಿದ್ದರೆ, ನಾನು ಸಿಎಂ ಇಬ್ರಾಹಿಂ, ಸಿದ್ದರಾಮಯ್ಯ ಹಾಗೂ ಜೆ.ಎಚ್ ಪಟೇಲ್ ಅವರನ್ನು ಬೆಳೆಸುತ್ತಿರಲಿಲ್ಲ ಎಂದು ಹೇಳುವುದರ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿರೂರಿನಲ್ಲಿಕಡೂರು ಶಾಸಕ ವೈ.ಎಸ್.ವಿ ದತ್ತ ಪರ ಪ್ರಚಾರದ ವೇಳೆ ಮಾತನಾಡಿದ ಅವರು,’ ಜೆಡಿಎಸ್​ಗೆ ಬಟನ್ ಹೊತ್ತಿದರೆ ಬಿಜೆಪಿಗೆ ಹೋಗುತ್ತೆ ಎಂದು ಮಹಾನ್ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಯಾರು ಅವರು, ಎಲ್ಲಿದ್ದರು ಎಂದು ನನಗೆ ಗೊತ್ತು. ಅವರನ್ನು ರಾಜಕೀಯವಾಗಿ ತಲೆ ಮೇಲೆ ಹೊತ್ತುಕೊಂಡು ನಾನು ತಿರುಗಿದ್ದೇನೆ. ನೆನಪಿರಲಿ ಈ ದೇವೇಗೌಡ ವ್ಯಕ್ತಿ ಅಲ್ಲ ಶಕ್ತಿ. ನನ್ನ ಹೆಸರಲ್ಲಿ ಗೌಡ ಅಂತ ಇರಬಹುದು. ಆದರೆ, ಸಣ್ಣ ಸಣ್ಣ ಜಾತಿಯವರನ್ನು ಹೊತ್ತಿಕೊಂಡು ನಾನು ಮುಂದೇ ತಂದಿದ್ದೇನೆ ಎಂದು ಪರೋಕ್ಷವಾಗಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments