Webdunia - Bharat's app for daily news and videos

Install App

ವೈದ್ಯರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಂಬನಿ

Webdunia
ಬುಧವಾರ, 16 ಸೆಪ್ಟಂಬರ್ 2020 (23:01 IST)
ಖ್ಯಾತ ವೈದ್ಯರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ.
 

ಹಾಸನ ಜಿಲ್ಲೆಯ ಖ್ಯಾತ ವೈದ್ಯರಾದ ಡಾ. ರಾಜೀವ್ ಅವರ ಅಕಾಲಿಕ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕಂಬನಿ‌ ಮಿಡಿದಿದ್ದಾರೆ.

ಡಾ. ರಾಜೀವ್ ಅವರು ಅಪ್ಪಟ ಗ್ರಾಮೀಣ ಹಿನ್ನೆಲೆಯಿಂದ ಬಂದು ಬಡಜನರ ಕಷ್ಟಸುಖ ಅರ್ಥೈಸಿಕೊಂಡು ಅದರಂತೆಯೇ ಕೆಲಸ ಮಾಡಿದವರು.

ರೈತ ಕುಟುಂಬದಿಂದ ಬಂದು ವೈದ್ಯಕೀಯ ಲೋಕದಲ್ಲಿ ತಾವೇ ಮಾದರಿಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದರು.

ಮಕ್ಕಳ ಚಿಕಿತ್ಸೆ ವಿಷಯದಲ್ಲಿ ಡಾ.ರಾಜೀವ್ ಮನೆ ಮಾತಾಗಿದ್ದರು.  ವೈದ್ಯ ವೃತ್ತಿಯ ಜೊತೆಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿ ಅನೇಕ ಮಕ್ಕಳೂ ಉನ್ನತ ವ್ಯಾಸಂಗ ಪಡೆಯಲು ಆಧಾರಸ್ತಂಭವಾಗಿದ್ದರು.

ನಿಸ್ವಾರ್ಥ ಸೇವೆಯ ಮೂಲಕ ಇಡೀ ಸಮಾಜ ಮೆಚ್ಚುವ ಕೆಲಸ ಮಾಡಿದ್ದಾರೆ. ಸಮಾಜಕ್ಕೆ ಅವರಿಂದ ಇನ್ನೂ ದೊಡ್ಡ ಸೇವೆ ಲಭ್ಯವಾಗಬೇಕಿತ್ತು. ಆದರೆ ಅವರು ನಮ್ಮ ನಡುವೆ ಇಲ್ಲ ಎಂಬುದು ವೈಯಕ್ತಿಕವಾಗಿ ಅತೀವ ನೋವು ತರಿಸಿದೆ.

ಅವರ ಅಕಾಲಿಕ ನಿಧನ ನನ್ನ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್.ಡಿ. ದೇವೇಗೌಡರು ತಮ್ಮ ಸಂತಾಪ‌ ಸಂದೇಶದಲ್ಲಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments