Webdunia - Bharat's app for daily news and videos

Install App

ಬಿಎಸ್ ವೈ ರಾಜೀನಾಮೆಯಿಂದ ಕಾಂಗ್ರೆಸ್ ಲಾಭವೋ ನಷ್ಟವೋ ಗೊತ್ತಿಲ್ಲ: ರಮೇಶ್ ಕುಮಾರ್

Webdunia
ಸೋಮವಾರ, 26 ಜುಲೈ 2021 (15:14 IST)

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಪ್ಲೆಸ್ಸೂ ಇಲ್ಲ ಮೈನಸ್ಸೂ ಆಗಲ್ಲ. ಅಧಿಕಾರ ಹೋದಾಗ ಎಲ್ಲರಿಗೂ ಬೇಸರ ಹಾಗೋದು ಸಹಜ. ಅದೇ ರೀತಿ ನಮಗೂ ನೋವಾಗತ್ತೆ ಅವರಿಗೂ ನೋವಾಗಿದೆ ಎಂದರು.

ಯಡಿಯೂರಪ್ಪ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಆರೋಗ್ಯ ಚೆನ್ನಾಗಿದ್ದು, ರಾಜಕಿಯ ಚಟುವಟಿಕೆಗಳು ಹೀಗೆ ಮುಂದವರೆಯಲಿ. ಅವರಿಗೆ 78 ವರ್ಷ ವಯಸ್ಸಾಗಿರುವುದರಿಂದ ಒತ್ತಡ ಇರುತ್ತೆ. ವಿಶ್ರಾಂತಿ ಅವಶ್ಯಕ ಬೇಕು ಎಂದು ಅವರು ಸಲಹೆ ನೀಡಿದರು.

ಪಕ್ಷದ ಸಿದ್ದಾಂತಕ್ಕೋ ಅಥವಾ ಒತ್ತಡಕ್ಕೋ ಯಡಿಯೂರಪ್ಪ ರಾಜಿನಾಮೆ ಸಲ್ಲಿಸಿದ್ದಾರೋ ಎಂದು ಬಲ್ಲವರು ಯಾರು? ಪಕ್ಷ ಅವರಿಗೆ ಅವಕಾಶ ಕೊಟ್ಟಿತ್ತು ಅದರಂತೆ ನಡೆದುಕೊಂಡಿದ್ದಾರೆ. ರಾಜಿನಾಮೆ ನಂತರ ಬೇಸರ ಸಹಜ ಒಂದೆರಡು ದಿನಗಳ ನಂತರ ಎಲ್ಲವೂ ಸರಿ ಹೋಗುತ್ತೆ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕೆಲವು ವಲಸಿಗರು ಬಿಜೆಪಿ ಸಿದ್ದಾಂತ ನಂಬಿ ಹೋದರೋ ಇಲ್ಲವೇ ಯಡಿಯೂರಪ್ಪ ಅವರ ಸಿದ್ದಾಂತ ನಂಬಿ ಹೋದರೋ ಅದು ನನಗೆ ಗೊತ್ತಿಲ್ಲ. ನನಗೆ ಈ ಬಗ್ಗೆ ಯಾರೂ ಏನೂ ಹೇಳಿಲ್ಲ. ಯಡಿಯೂರಪ್ಪ ರಾನೀನಾಮೆ ಕುರಿತು ಮಾಠಾಧೀಶರ ವಿರೋಧ ಕುರಿತು ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments