Webdunia - Bharat's app for daily news and videos

Install App

ವಿಐಪಿ ಜತೆ ಫೋಟೊಗೆ ಫೋಸ್: ಗನ್ ಮ್ಯಾನ್ ಸಸ್ಪೆಂಡ್!

Webdunia
ಶನಿವಾರ, 7 ಜುಲೈ 2018 (18:23 IST)
ಭದ್ರತೆಗೆ ನಿಯೋಜಿತರಾದ ಗನ್‍ಮ್ಯಾನ್ ಒಬ್ಬರು ವಿಐಪಿ ಜತೆ ಫೋಟೊಗೆ  ಫೋಸ್  ಕೊಟ್ಟು ಕೆಲಸ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ರಹೀಂ ಉಚ್ಚಿಲ್ ಜೊತೆ ಫೋಟೋಗೆ ಪೋಸ್ ಕೊಟ್ಡ ಗನ್ ಮ್ಯಾನ್ ಮಲ್ಲಿಕಾರ್ಜುನ ಅಮಾನತ್ತಾ ದವರು.

 
ರಹೀಂ ಉಚ್ಚಿಲ್ ದುಬೈಗೆ ತೆರಳುವ ಸಂದರ್ಭ ಗನ್ ಮ್ಯಾನ್ ಜತೆ ಹಲವು ಫೋಟೊ ಮತ್ತು ಸೆಲ್ಫಿ ತೆಗೆಸಿಕೊಂಡಿದ್ದರು. ಗನ್‍ಮ್ಯಾನ್ ಅವರು ಗನ್ ಮುಂದೆ ಮಾಡಿ, ತಾನು ಫೋಸ್ ಕೊಟ್ಟಿದ್ದರು. ರಹೀಂ ಫೋಟೊವನ್ನು ಫೇಸ್ ಬುಕ್‍ನಲ್ಲಿ ಹಾಕಿಕೊಂಡಿದ್ದರು. ಭದ್ರತೆ ನಿಯಮಕ್ಕೆ ಅನುಗುಣವಾಗಿ ಅಂಗರಕ್ಷಕರು ಈ ರೀತಿ ವಿಐಪಿಗಳ ಜತೆ ಫೋಟೊ ತೆಗೆಸಿಕೊಳ್ಳುವಂತಿಲ್ಲ ಮತ್ತು ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಈ ಕುರಿತು ನಗರ ಸಶಸ್ತ್ರ ಮೀಸಲು ಪಡೆಯ ಎಸಿಪಿ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಅಮಾನತು ಆದೇಶ ಹೊರಡಿಸಿದ್ದಾರೆ. 

ರಹೀಂ ಉಚ್ಚಿಲ್ ಅವರ ಮೇಲೆ ಹಿಂದೊಮ್ಮೆ ಕೊಲೆ ಯತ್ನ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ರಕ್ಷಣೆಗೆ ಗನ್ ಮ್ಯಾನ್ ನೀಡಲಾಗಿತ್ತು. ಮಲ್ಲಿಕಾರ್ಜುನ ಅವರು ಅಂಗರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ರಹೀಂ ಉಚ್ಚಿಲ್ ಜೂ.23ರಂದು ದುಬೈಗೆ ತೆರಳುವ ಸಂದರ್ಭ ಗನ್ ಮ್ಯಾನ್ ಜತೆ ಫೋಟೊ ತೆಗೆಸಿಕೊಂಡಿದ್ದರು. ಮಾತ್ರವಲ್ಲದೆ ಅದಕ್ಕೆ ಒಕ್ಕಣೆ ಸೇರಿಸಿ, ತಾನು ದುಬೈಗೆ ಹೋಗುವುದಾಗಿ ಫೇಸ್ ಬುಕ್‍ನಲ್ಲಿ ಬರೆದು  ಫೋಟೊಗಳನ್ನು ಅಪ್‍ಲೋಡ್ ಮಾಡಿದ್ದರು. ಇದಾದ ಬಳಿಕ ಗನ್‍ಮ್ಯಾನ್  ಸಶಸ್ತ್ರ ಮೀಸಲು ಪಡೆಗೆ ತನ್ನ ಗನ್  ಒಪ್ಪಿಸಿ, ಯಾರಲ್ಲೂ ಹೇಳದೆ ಕೇಳದೆ ನೇರವಾಗಿ ತನ್ನ ಊರಿಗೆ ಹೊರಟು ಹೋಗಿದ್ದರು. ರಜೆಗೆ ಅರ್ಜಿಯನ್ನು ಕೂಡಾ ಸಲ್ಲಿಸಿರಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments