Publish Date: Sat, 01 Apr 2023 (16:50 IST)
Updated Date: Sat, 01 Apr 2023 (14:20 IST)
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳೂರಿನ K.S. ರಾವ್ ರಸ್ತೆಯ ಕರುಣಾ ಲಾಡ್ಜ್ನಲ್ಲಿ ನಡೆದಿದೆ. ದಂಪತಿ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮೈಸೂರು ಮೂಲದವರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು? ಎನ್ನುವುದು ತಿಳಿದುಬರಬೇಕಿದೆ.