Select Your Language

Notifications

webdunia
webdunia
webdunia
webdunia

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ!

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ!
ಚಿತ್ರದುರ್ಗ , ಸೋಮವಾರ, 14 ಆಗಸ್ಟ್ 2023 (08:38 IST)
ಚಿತ್ರದುರ್ಗ : ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನನಪ್ಪಿದ್ದಾರೆ.
 
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಸಂಗನಬಸಪ್ಪ(36), ರೇಖಾಂಶ(29), ಭೀಮಾಶಂಕರ್(26) ಹಾಗೂ ಅಗಸ್ತ್ಯ(8) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಮೂಲದ ಒಂದೇ ಕುಟುಂಬದವರು.

ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುವ ವೇಳೆ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಅವಘಡದಲ್ಲಿ ಆದರ್ಶ(3), ಪುತ್ರಿ ಅನ್ವಿಕಾ(5) ಹಾಗೂ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಎಂ ಬಿ ಪಾಟೀಲ್ ಟಾಂಗ್