Webdunia - Bharat's app for daily news and videos

Install App

ಸಿಗರೇಟು ಸೇದಬೇಡಿ ಎಂದಿದ್ದಕ್ಕೆ ಯುವಕನನ್ನು ಹತ್ಯೆಗೈದ ದುರುಳರು

Webdunia
ಮಂಗಳವಾರ, 3 ಅಕ್ಟೋಬರ್ 2017 (14:45 IST)
ಮನೆಯ ಬಳಿ ಗಲಾಟೆ ಮಾಡುತ್ತಾ ಸಿಗರೇಟು ಸೇದುತ್ತಿರುವುದಕ್ಕೆ ಸಿಗರೇಟು ಸೇದಬೇಡಿ ಎಂದು ಬುದ್ದಿವಾದ ಹೇಳಿದ 32 ವರ್ಷದ ವ್ಯಕ್ತಿಯನ್ನು ನಾಲ್ಕು ಜನ ಯುವಕರ ಗುಂಪೊಂದು ಹತ್ಯೆ ಮಾಡಿ ಪರಾರಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಳಗಿನ ಜಾವ ಎರಡು ಗಂಟೆಗೆ ಅಶೋಕ್‌ನಗರದ ಬಿ ಬಡಾವಣೆಯಲ್ಲಿರುವ ನಿವಾಸದ ಬಳಿ ಕೆಲ ಯುವಕರ ಗುಂಪೊಂದು ಗಲಾಟೆ ಮಾಡುತ್ತಾ ಸಿಗರೇಟು ಸೇದುತ್ತಿರುವುದರಿಂದ ಆಕ್ರೋಶಗೊಂಡ ಹರೀಶ್ ಎಂಬಾತ, ಯುವಕರನ್ನು ತರಾಟೆಗೆ ತೆಗೆದುಕೊಂಡ ಎನ್ನಲಾಗಿದೆ.
 
ಸಿಗರೇಟು ಸೇದಬೇಡಿ ಅದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂದು ಹರೀಶ್ ಹೇಳಿದಾಗ ಯುವಕರ ಗುಂಪು ಅಲ್ಲಿಂದ ತೆರಳಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆದರೆ, ಹರಿತವಾದ ಆಯುಧಗಳೊಂದಿಗೆ ಮರಳಿ ಬಂದ ಯುವಕರ ಗುಂಪು ಮನೆಯ ಮುಂದೆ ನಿಂತಿದ್ದ ಹರೀಶ್ ಮೇಲೆ ಏಕಾಏಕಿ ದಾಳಿ ಮಾಡಿ ಹತ್ಯೆಗೈದು ಪರಾರಿಯಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪೋಷಕರು ಹರೀಶ್‌ನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿಗಳ ಬಗ್ಗೆ ಕೆಲ ಸುಳಿವುಗಳು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments