Webdunia - Bharat's app for daily news and videos

Install App

ಸಿಗರೇಟು ಸೇದಬೇಡಿ ಎಂದಿದ್ದಕ್ಕೆ ಯುವಕನನ್ನು ಹತ್ಯೆಗೈದ ದುರುಳರು

Webdunia
ಮಂಗಳವಾರ, 3 ಅಕ್ಟೋಬರ್ 2017 (14:45 IST)
ಮನೆಯ ಬಳಿ ಗಲಾಟೆ ಮಾಡುತ್ತಾ ಸಿಗರೇಟು ಸೇದುತ್ತಿರುವುದಕ್ಕೆ ಸಿಗರೇಟು ಸೇದಬೇಡಿ ಎಂದು ಬುದ್ದಿವಾದ ಹೇಳಿದ 32 ವರ್ಷದ ವ್ಯಕ್ತಿಯನ್ನು ನಾಲ್ಕು ಜನ ಯುವಕರ ಗುಂಪೊಂದು ಹತ್ಯೆ ಮಾಡಿ ಪರಾರಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಳಗಿನ ಜಾವ ಎರಡು ಗಂಟೆಗೆ ಅಶೋಕ್‌ನಗರದ ಬಿ ಬಡಾವಣೆಯಲ್ಲಿರುವ ನಿವಾಸದ ಬಳಿ ಕೆಲ ಯುವಕರ ಗುಂಪೊಂದು ಗಲಾಟೆ ಮಾಡುತ್ತಾ ಸಿಗರೇಟು ಸೇದುತ್ತಿರುವುದರಿಂದ ಆಕ್ರೋಶಗೊಂಡ ಹರೀಶ್ ಎಂಬಾತ, ಯುವಕರನ್ನು ತರಾಟೆಗೆ ತೆಗೆದುಕೊಂಡ ಎನ್ನಲಾಗಿದೆ.
 
ಸಿಗರೇಟು ಸೇದಬೇಡಿ ಅದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂದು ಹರೀಶ್ ಹೇಳಿದಾಗ ಯುವಕರ ಗುಂಪು ಅಲ್ಲಿಂದ ತೆರಳಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆದರೆ, ಹರಿತವಾದ ಆಯುಧಗಳೊಂದಿಗೆ ಮರಳಿ ಬಂದ ಯುವಕರ ಗುಂಪು ಮನೆಯ ಮುಂದೆ ನಿಂತಿದ್ದ ಹರೀಶ್ ಮೇಲೆ ಏಕಾಏಕಿ ದಾಳಿ ಮಾಡಿ ಹತ್ಯೆಗೈದು ಪರಾರಿಯಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪೋಷಕರು ಹರೀಶ್‌ನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿಗಳ ಬಗ್ಗೆ ಕೆಲ ಸುಳಿವುಗಳು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments