Webdunia - Bharat's app for daily news and videos

Install App

ಮತ ಹಾಕಲು ಐದು ಕೋಟಿ ಡಿಮ್ಯಾಂಡ್ ಇಟ್ಟ ನಾಲ್ವರು ಶಾಸಕರು

Webdunia
ಗುರುವಾರ, 2 ಜೂನ್ 2016 (19:41 IST)
ರಾಜ್ಯಸಭೆ ಚುನಾವಣೆಗೆ ಬೆಂಬಲ ಸೂಚಿಸಲು ಕೋಟಿ ಕೋಟಿ ಡಿಮ್ಯಾಂಡ್ ಮಾಡಿರುವ ನಾಲ್ವರು ಶಾಸಕರ ಬಂಡವಾಳ ಖಾಸಗಿ ವಾಹಿನಿಯೊಂದು ಬಹಿರಂಗ ಪಡಿಸಿದೆ.
 
ರಾಜ್ಯ ಸಭೆ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿಗಳಿಗೆ ಮತ ಹಾಕಲು ಶಾಸಕರು 5 ಕೋಟಿ ರೂಪಾಯಿಗಳಿಗೆ ಡಿಮ್ಯಾಂಡ್ ಮಾಡಿರುವ ಭ್ರಷ್ಟ ಕೃತ್ಯವನ್ನು ಖಾಸಗಿ ಚಾನೆಲ್ ನಡೆಸಿರುವ ಸ್ಟ್ರಿಂಗ್ ಆಪರೇಶನ್‌ಲ್ಲಿ ಅವರ ಬಂಡವಾಳ ಬಯಲಾಗಿದೆ.  
 
ರಾಜ್ಯ ರಾಜಕೀಯದಲ್ಲಿ ಚುನಾವಣೆಯ ರಂಗು ತಾರತಕ್ಕೆರಿದ್ದು, ಎಲ್ಲ ರಾಜಕೀಯ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸುತ್ತಿವೆ. ರಾಜಕೀಯ ಪಕ್ಷಗಳ ನಾಯಕರು ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವುದು. ಈ ಬಾರಿಯ ಚುನಾವಣೆಯಲ್ಲಿ ಹಣದ ಹೊಳೆ ನೀರಿನಂತೆ ಹರಿಯುವ ನಿರೀಕ್ಷೆ ಇದೆ. 
 
ಚುನಾವಣೆಯಲ್ಲಿ ಜಯಭೇರಿಯಾಗಲು ರಾಜಕೀಯ ಪಕ್ಷಗಳು ಹಣದ ಹೊಳೆ ಹರಿಸುವುದು ಹೊಸದೆನಲ್ಲ. ಚುನಾವಣೆಗಳು ಸಮೀಪಿಸುತ್ತಿದಂತೆ ರಾಜಕಾರಣಿಗಳು ಕುದುರೆ ವ್ಯಾಪಾರದಲ್ಲಿ ತೊಡಗುವುದು ಸಹಜವೇ ಸರಿ. ಇದೀಗ, ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಶಾಸಕರು ಕೋಟಿ ಕೋಟಿ ಬೆಲೆಗೆ ತಮ್ಮ ಮತವನ್ನು ಮಾರಾಟಕಿಟ್ಟಿದ್ದಾರೆ. 
 
ಬಸವ ಕಲ್ಯಾಣ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ್ ಖೂಬಾ, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜೆ.ಟಿ.ದೇವೇಗೌಡ, ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಮತ್ತು ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತುರ್ ಪ್ರಕಾಶ್ ರಾಜ್ಯಸಭೆಗೆ ಬೆಂಬಲ ಸೂಚಿಸಲು 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಶಾಸಕರಾಗಿದ್ದಾರೆ. 
 
ರಾಜ್ಯ ಜೆಡಿಎಸ್ ಪಕ್ಷದಲ್ಲಿ ಆಂತರಿಕ ಕಲಹ ಉಂಟಾಗಿದ್ದು, ಜೆಡಿಎಸ್ ಶಾಸಕರ ಮೇಲೆ ಕುಮಾರಸ್ವಾಮಿ ಅವರ ಹಿಡಿತ ತಪ್ಪಿದಂತೆ ಕಾಣುತ್ತಿದೆ. ಖಾಸಗಿ ಚಾನೆಲ್ ನಡೆಸಿರುವ ಸ್ಟ್ರಿಂಗ್ ಆಪರೇಶನ್‌ನಲ್ಲಿ ಇಬ್ಬರು ಜೆಡಿಎಸ್‌ ಪಕ್ಷದ ಶಾಸಕರ ಬಂಡವಾಳ ಬಹಿರಂಗವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ 10 ಶಾಸಕರು ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಬೆಂಬಲಿಸುವ ನಿರೀಕ್ಷೆಯಾಗಿದೆ.
 
ನಾಲ್ವರು ಶಾಸಕರು ಡಿಮ್ಯಾಂಡ್ ಮಾಡುವ ಮೂಲಕ ತಮ್ಮ ಮತಗಳನ್ನು ಮಾರಾಟಕ್ಕಿಟಿರುವ ಹಿನ್ನೆಲೆಯಲ್ಲಿ ರಾಜ್ಯದ ಮಾನ ಮರ್ಯಾದೆ ದೇಶದಲ್ಲಿ ಹರಜು ಹಾಕಿದಂತಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments