Webdunia - Bharat's app for daily news and videos

Install App

ಫೋಕ್ಸೊ ಪ್ರಕರಣ : ಮುರುಘಾ ಶ್ರೀಗಳಿಗೆ ಸಿಗುತ್ತಾ ಜಾಮೀನು..?

Webdunia
ಗುರುವಾರ, 1 ಸೆಪ್ಟಂಬರ್ 2022 (10:41 IST)
ಬೆಂಗಳೂರು : ಮುರುಘಾ ಶ್ರೀಗಳ ವಿರುದ್ಧ ಫೋಕ್ಸೊ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.

ಈ ಸಂಬಂಧ ಎಸ್ಪಿಗೆ ನೋಟಿಸ್ ನೀಡಿದ್ದು ಮುಂದಿನ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದೆ. ಪ್ರಕರಣ ಸಂಬಂಧ ಏನು ಕ್ರಮ ಕೈಗೊಂಡಿದ್ದೀರಿ ಎಂಬ ಬಗ್ಗೆ ವರದಿ ಕೇಳಲಾಗಿದೆ.

ಇತ್ತ ಮಠಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಇಂದು ವಿದ್ಯಾರ್ಥಿನಿಯರ ಸಿಆರ್ಪಿಸಿ 164 ಹೇಳಿಕೆ ತನಿಖಾಧಿಕಾರಿಗಳ ಕೈ ಸೇರಲಿದೆ.

ಮುರುಘಾ ಶರಣರಿಗೆ ಸಿಆರ್ಪಿಸಿ ಸೆಕ್ಷನ್ 41ಎ ಅಡಿ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಆರೋಪಿ ಬಂಧನ ಅಗತ್ಯವಿಲ್ಲದ ಸಂದರ್ಭದಲ್ಲಿ ಪೊಲೀಸರ ಮುಂದೆ ಹಾಜರಾಗಲು ಈ ನೋಟಿಸ್ ಅನ್ನು ಜಾರಿ ಮಾಡಲಾಗುತ್ತದೆ.

ತನಿಖಾಧಿಕಾರಿಗಳು ಪರಿಶೀಲಿಸಿ ಬಳಿಕ ಶ್ರೀಗಳಿಗೆ ನೋಟಿಸ್ ನೀಡಬಹುದಾಗಿದೆ. ಅಲ್ಲದೇ ಇಂದು ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯೂ ಬರಲಿದೆ. ಇನ್ನು ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಹಿಂದೂಸ್ತಾನ್ ಜನತಾ ಪಕ್ಷದಿಂದ ಒತ್ತಾಯ ಕೇಳಿ ಬಂದಿದೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments