ವಿವಾಹವಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪದ ಮೇಲೆ ಗುಂಡ್ಲುಪೇಟೆ ಪೊಲೀಸರು ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಟಿಪುರ ಗ್ರಾಮ ಪಂಚಾಯತ್ ಸದಸ್ಯ ಪರಮೇಶ್ ಎಂದು ಗುರುತಿಸಲಾಗಿದೆ.
ಪರಮೇಶ್ ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದ. ನಾನು ಗರ್ಭಿಣಿಯಾಗಿದ್ದೇನೆ ಮದುವೆಯಾಗು ಎಂದರೆ ಅದಕ್ಕೆ ನಿರಾಕರಿಸಿದ್ದ ಆತ 5 ಲಕ್ಷ ರೂಪಾಯಿ ನೀಡುತ್ತೇನೆ, ಈ ಕುರಿತು ಯಾರಿಗೂ ಹೇಳಬೇಡ ಎಂದು ಆಮಿಷ ಒಡ್ಡಿದ್ದ ಎಂದು ನೊಂದ ಯುವತಿ ದೂರು ನೀಡಿದ್ದಾಳೆ. ಆಕೆಯ ದೂರನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.