Webdunia - Bharat's app for daily news and videos

Install App

ವಂಚನೆ ಪ್ರಕರಣ: ಕೊನೆಗೂ ನ್ಯಾಯಾಲಯಕ್ಕೆ ಹಾಜರಾದ ನಟಿ ಪೂಜಾ ಗಾಂಧಿ

Webdunia
ಶುಕ್ರವಾರ, 13 ಜನವರಿ 2017 (19:14 IST)
ನಾಲ್ಕು ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 16ನೇ ಎಸಿಎಂಎಂ ಕೋರ್ಟ್‌ಗೆ ನಟಿ ಪೂಜಾ ಗಾಂಧಿ ಹಾಜರಾಗಿದ್ದರು. 
ನಟಿ ಪೂಜಾ ಗಾಂಧಿ ಹಾಗೂ ಅವರ ತಂದೆ ಮೇಲಿನ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಖುದ್ದು ಹಾಜರಾಗುವಂತೆ 16ನೇ ಎಸಿಎಂಎಂ ಕೋರ್ಟ್‌ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಪೂಜಾ ಗಾಂಧಿ ಹಾಗೂ ಅವರ ತಂದೆ ಕೋರ್ಟ್‌ಗೆ ಹಾಜರಾಗಿದ್ದರು. 
 
ಮುತ್ತುಲಕ್ಷ್ಮೀ ಸಿನಿಮಾ ನಿರ್ಮಾಣಕ್ಕಾಗಿ ನಿರ್ಮಾಪಕ ವಿಜಯ್ ಕುಮಾರ್ ಅವರಿಂದ 4 ಕೋಟಿ ರೂಪಾಯಿ ಹಣವನ್ನು ಪಡೆದಿದ್ದರು. ನಂತರ ಅವರು ಹಣಕ್ಕೆ ಬದಲು ಚೆಕ್ ನೀಡಿದ್ದಾರೆ. ಆದರೆ, ಅವರ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದೆ ಚೆಕ್ ಬೌನ್ಸ್ ಆಗಿತ್ತು. ತದನಂತರ ಹಣವನ್ನೂ ನೀಡದೆ ವಂಚಿಸಿದ್ದಾರೆ ಎನ್ನುವ ಆರೋಪ ನಟಿ ಪೂಜಾ ಗಾಂಧಿ ಅವರ ಮೇಲೆ ಕೇಳಿ ಬಂದಿತ್ತು.
 
ಈ ಕುರಿತು ನಿರ್ಮಾಪಕ ವಿಜಯ್ ಕುಮಾರ್ ವಂಚನೆ ಹಾಗೂ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಈ ಹಿಂದೆ, ನಟಿ ಪೂಜಾ ಗಾಂಧಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿ ಮಾಡಲಾಗಿತ್ತು. ಅದರಂತೆ ಇಂದು ಪೂಜಾ ಗಾಂಧಿ ಹಾಗೂ ಅವರ ತಂದೆ ಕೋರ್ಟ್‌ಗೆ ಹಾಜರಾಗಿದ್ದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments