Webdunia - Bharat's app for daily news and videos

Install App

ಕಾಂಗ್ರೆಸ್‌ ಮುಖಂಡೆಯ ಸೋಗಿನಲ್ಲಿ ವಂಚನೆ!

geetha
ಸೋಮವಾರ, 29 ಜನವರಿ 2024 (21:17 IST)
ಕಾಂಗ್ರೆಸ್‌ ಮುಖಂಡೆ
ಬೆಂಗಳೂರು : ತಾನು ಕಾಂಗ್ರೆಸ್‌ ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ ನಡೆಸಿರುವ ಪ್ರಕರಣ ಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್‌ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ರೂಪ ಎಂಬ ಮಹಿಳೆ ತಮ್ಮ ಸೋದರನಿಗೆ ಸರ್ಕಾರಿ ನೌಕರಿ ಕೊಡಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅವರಿಗೆ ಹರೀಶ್‌ ಮತ್ತು ಭಾನುಪ್ರಕಾಶ್‌ ಎಂಬ ವ್ಯಕ್ತಿಗಳ ಮೂಲಕ ಸಂಧ್ಯಾ ಪವಿತ್ರಾ ಪರಿಚಿತಳಾಗಿದ್ದಳು. ಹಂತಹಂತವಾಗಿ ರೂಪ ಅವರಿಂದ 11.20 ಲಕ್ಷ ರೂ. ಹಣ ಪಡೆದಿದ್ದ ಸಂಧ್ಯಾ ತಂಡ, ಬಳಿಕ ತಲೆ ಮರೆಸಿಕೊಂಡಿತ್ತು. 
 
ಈ ಬಗ್ಗೆ ರೂಪ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದಾಗ ಠಾಣೆಗೆ ಹಾಜರಾಗಿ ಹಣ ಹಿಂದಿರುಗಿಸುವುದಾಗಿ ಮುಚ್ಚಳಿಕೆ ಮತ್ತು ಚೆಕ್‌ ಬರೆದುಕೊಟ್ಟಿದ್ದರು. ಆದರೆ ಈಗ ಚೆಕ್‌ ಬ್ಯಾಂಕ್‌ ನಿಂದ ತಿರಸ್ಕೃತಗೊಂಡಿದ್ದರೆ, ಸಂಧ್ಯಾ ಕಾನೂನು ಮಖಾಂತರವೇ ಬಗೆಹರಿಸಿಕೊಳ್ಳಿ ಎಂದು ಧಮಕಿ ಹಾಕಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments