Webdunia - Bharat's app for daily news and videos

Install App

ಬೃಹತ್ ಬೆಂಗಳೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೇಲೆ ವಂಚನೆ

Webdunia
ಭಾನುವಾರ, 5 ಸೆಪ್ಟಂಬರ್ 2021 (20:42 IST)
ಬೆಂಗಳೂರು: ಬೃಹತ್ ಬೆಂಗಳೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೇಲೆ ವಂಚನೆ ಆರೋಪ ಕೇಳಿ ಬಂದಿದ್ದು, ಸೊಸೈಟಿ ಮಾಲೀಕ ನೂರಾರು ಜನರಿಂದ ಕೋಟ್ಯಂತರ ಹಣ ಪಡೆದು ಪರಾರಿ ಆಗಿದ್ದಾನೆ ಎಂದು ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಟಿ.ದಾಸರಹಳ್ಳಿಯ ಶೆಟ್ಟಿಹಳ್ಳಿಯಲ್ಲಿ ಘಟನೆ ವರದಿಯಾಗಿದೆ. ಶರೀಶ್ ಸುಬ್ರಾಯ ಹೆಗಡೆ ಎಂಬುವವರ ಒಡೆತನದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಳೆದ ಕೆಲವು ದಿನಗಳಿಂದ ಸೊಸೈಟಿಗೆ ಬೀಗ ಜಡಿಯಲಾಗಿದ್ದು, ಮಾಲೀಕ ಹಾಗೂ ಸಿಬ್ಬಂದಿ ನಾಪತ್ತೆ ಹಿನ್ನೆಲೆ ಗ್ರಾಹಕರು ಆತಂಕದಲ್ಲಿದ್ದಾರೆ.
ಮೊದಲು ಜನರ ನಂಬಿಕೆ ಗಳಿಸಿದ್ದ ಸೊಸೈಟಿ ಗೋಲ್ಡ್ ಲೋನ್ ಕೂಡ ಕೊಡುತ್ತಿತ್ತು. ಇದೀಗ ಜನರ ಚಿನ್ನದ ಸಮೇತ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಹಣ ಕಟ್ಟಿಸಿಕೊಂಡು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಟ್ಟಿರುವ ಚೆಕ್ ಗಳು ಕೂಡ ಬೌನ್ಸ್ ಆಗಿವೆ ಎನ್ನಲಾಗಿದೆ. ಸುಮಾರು ಮೂರು ಸಾವಿರಕ್ಕೂ ಅಧಿಕ ಜನರಿಂದ ಹಣ ಕಟ್ಟಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ಸಾವಿರಾರು ಮಂದಿ ಹೂಡಿಕೆದಾರರು ನ್ಯಾಯ ಕೊಡಿಸುವಂತೆ ಬಾಗಲಗುಂಟೆ ಪೊಲೀಸರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ: ಆರ್‌ ಅಶೋಕ್‌

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments