Webdunia - Bharat's app for daily news and videos

Install App

ಕೆನಡಾದ ಸರಕಾರಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಹುದ್ದೆ ಕೊಡಿಸುವುದಾಗಿ ವಂಚನೆ

Webdunia
ಸೋಮವಾರ, 13 ಸೆಪ್ಟಂಬರ್ 2021 (21:05 IST)
ಕೆನಡಾದ ಸರಕಾರಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಹುದ್ದೆ ಕೊಡಿಸುವುದಾಗಿ ಹೇಳಿ ಸೈಬರ್ ಖದೀಮನೊಬ್ಬ ಮಹಿಳೆಯೊಬ್ಬರಿಗೆ 18.41 ಲಕ್ಷ ರೂ. ವಂಚಿಸಿದ್ದಾನೆ. 
ರಾಜಾಜಿನಗರ 44 ವರ್ಷದ ಮಹಿಳೆ ವಂಚನೆಗೊಳಗಾದವರು. ಸೈಬರ್ ಖದೀಮ ಮಹಿಳೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು ಬಳಿಕ ಅವರ ಮೊಬೈಲ್ ಸಂಖ್ಯೆ ಪಡೆದು ಚಾಟ್ ಪ್ರಾರಂಭಿಸಿದ್ದ. ವಾಟ್ಸ್ಯಾಪ್‍ನಲ್ಲಿ ಚಾಟ್ ಮಾಡುವ ವೇಳೆ ಉತ್ತಮ ಸಂಬಳವಿರುವ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದ. 
 ಅದೇ ರೀತಿ ಇಬ್ಬರು ತುಂಬಾ ಪರಿಚಯವಾದ ಬಳಿಕ ಕೆನಡಾದ ಟೊರಾಂಟೊ ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥಾಪಕರ ಹುದ್ದೆ ಖಾಲಿ ಇದೆ. ಕೈ ತುಂಬಾ ಸಂಬಳ ಸಿಗಲಿದೆ. ನೀವು ಬಯಸಿದರೆ ಹುದ್ದೆ ಕೊಡಿಸುವುದಾಗಿ ತಿಳಿಸಿದ್ದ. ಇದಕ್ಕೆ ಒಪ್ಪಿದ ಮಹಿಳೆಯಿಂದ ವೀಸಾ ಅಪ್ಲೀಕೇಷನ್ ಶುಲ್ಕ, ಪೆÇಲೀಸ್ ಪರಿಶೀಲನಾ ಪ್ರಮಾಣಪತ್ರ, ಮೆಡಿಕಲ್ ಸರ್ಟಿಫಿಕೇಟ್, ವಿಮಾ ಪಾಲಿಸಿ, ಬಯೋಮೆಟ್ರಿಕ್ ಎಂದು ನಾನಾ ಕಾರಣ ಹೇಳಿ ಹಂತ- ಹಂತವಾಗಿ 18.41 ಲಕ್ಷ ರೂ. ವಸೂಲಿ ಮಾಡಿದ್ದಾನೆ.
ಮತ್ತೆ ಮತ್ತೆ ಹಣ ಕೇಳಿದಾಗ ಅನುಮಾನ ಬಂದು ಮಹಿಳೆ ಈಗಾಗಲೇ ನೀಡಿರುವ ಹಣ ವಾಪಸ್ ನೀಡುವಂತೆ ಕೇಳಿದ್ದಾರೆ. ಕೊನೆಗೆ ಸೈಬರ್ ವಂಚಕ ಮೊಬೈಲ್ ಸಂಪರ್ಕ ಕಡಿತ ಮಾಡಿಕೊಂಡಿದ್ದಾನೆ. ನೊಂದ ಮಹಿಳೆ ಉತ್ತರ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿರುವುದಾಗಿ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲಸದ ಆಮಿಷವೊಡ್ಡಿ ಲಕ್ಷಾಂತರ ರೂ. ಪಡೆದು ಮೋಸ ಮಾಡುವ ಸೈಬರ್ ವಂಚಕರ ಜಾಲ ಸಕ್ರಿಯವಾಗಿದ್ದು, ಇಂತಹ ಹಲವು ಪ್ರಕರಣಗಳು ನಗರ ಸಿಇಎನ್ ಠಾಣೆಯಲ್ಲಿ ದಾಖಲಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments