ಲೇಔಟ್​ ನಿವೇಶನ ಮಾಡಿ ಹಂಚಿಕೆಯಲ್ಲಿ ಪಾಲುದಾರನಿಗೆ ವಂಚನೆ

Webdunia
ಶನಿವಾರ, 4 ಫೆಬ್ರವರಿ 2023 (19:46 IST)
ಲೇಔಟ್​ ನಿವೇಶನ ಮಾಡಿ  ಹಂಚಿಕೆಯಲ್ಲಿ ಪಾಲುದಾರನಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ  ಬಿಜೆಪಿ ಎಂಎಲ್​ಸಿ ಆರ್​. ಶಂಕರ್​ ಅವರ ಪತ್ನಿ ಧನಲಕ್ಷ್ಮಿ ಆರ್ ಶಂಕರ್ ಹಾಗೂ ಪುತ್ರ ಜ್ಯೋತಿರ್ ತೇಜೋಮಯಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆಅಲ್ಲದೆ, ರಾಜಣ್ಣ ಎಂಬ ಇನ್ನೊರ್ವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
 
ಅಕ್ರಮವಾಗಿ 23 ಸೈಟ್​ಗಳನ್ನು ಮಾರಾಟ ಮಾಡುವ ಮೂಲಕ ವಂಚನೆ ಮಾಡಿದ್ದಾರೆ ಎಂದು ಕಂಪನಿಯ ಪಾಲುದಾರರಾದ ಪ್ರಭಾವತಿ  ಇಂದಿರಾನಗರ ಠಾಣೆಗೆ ದೂರು‌ ನೀಡಿದ್ದಾರೆ.ಕಂಪನಿ ಹೆಸರಿನಲ್ಲಿ ಬಿದರಹಳ್ಳಿಯ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಾಣ‌ ಮಾಡಿದ್ದರು. ನಿರ್ಮಾಣದ ವೇಳೆ ನಾಲ್ವರು ಪಾಲುದಾರರ ನಡುವೆ ಒಪ್ಪಂದ ಆಗಿತ್ತು. ಸೈಟ್ ಹಂಚಿಕೆ ವೇಳೆ ಎಲ್ಲರ ಸಹಿ ಕಡ್ಡಾಯ ಎಂಬ ಒಪ್ಪಂದಕ್ಕೆ ಎಲ್ಲರು ಸಹಿ ಹಾಕಿದ್ದರು. ಇದೀಗ ಪ್ರಭಾವತಿ ಅವರನ್ನು ಬಿಟ್ಟು ಇನ್ನುಳಿದ ಮೂವರು ಸೈಟ್ ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ಜತೆಗೆ ಅಕ್ರಮವಾಗಿ ಬ್ಯಾಂಕ್​​ನಲ್ಲಿ ಖಾತೆ ತೆಗೆದು ವಂಚನೆ ಮಾಡಿರುವುದಾಗಿ ದೂರಿನಲ್ಲಿ ಪ್ರಭಾವತಿ ಅವರು ಉಲ್ಲೇಖಿಸಿದ್ದಾರೆ. ಸದ್ಯ ಮೂವರ ವಿರುದ್ಧ ಪ್ರಕರಣ ದಾಖಲಿಸಿರುವ ಇಂದಿರಾನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನರಿಗೆ ತೊಂದರೆ ಕೊಡಲ್ಲ, ಮೆಟ್ರೋ ದರ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್

ಏನಿದು ಹಿಂಗೆ ಆಗೋಯ್ತಲ್ಲಾ... ಎಸ್ಕಲೇಟರ್ ಹತ್ತಿದ ಬೆಕ್ಕು ಫುಲ್ ಕನ್ ಫ್ಯೂಸ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ

ಮುಂದಿನ ಸುದ್ದಿ
Show comments