ಸಂತ್ರಸ್ತರಿಗೆ ಉಚಿತ ಶಿಕ್ಷಣ ಮುಂದಾದ ಮುಖಂಡ

Webdunia
ಮಂಗಳವಾರ, 28 ಆಗಸ್ಟ್ 2018 (13:38 IST)
ಕೊಡಗು ನೆರೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ರಾಜ್ಯದ ವಿವಿಧೆಡೆ ದಾನಿಗಳು ಮುಂದಾಗಿದ್ದಾರೆ. ಏತನ್ಮಧ್ಯೆ ಸಂತ್ರಸ್ತರ ಕುಟಂಬಗಳ ಮಕ್ಕಳಿಗೆ ಮಾಜಿ ಸಚಿವರೊಬ್ಬರು ಉಚಿತ ಶಿಕ್ಷಣ ನೀಡಲು ಮುಂದಾಗಿದ್ದಾರೆ.

ಮಾಜಿ ಸಚಿವ ಹಾಗೂ ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಚೆನ್ನಿಗಪ್ಪಾ, ಕೊಡಗು ನೆರೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ಮುಂದಾಗಿದ್ದಾರೆ. ತಮ್ಮ ಒಡೆತನದ ವಿದ್ಯಾಸಂಸ್ಥೆಯಲ್ಲಿ ಸಂತ್ರಸ್ತರ ಕುಟುಂಬದ 100 ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ನೀಡುವುದಾಗಿ ಘೋಷಿಸಿದ್ದಾರೆ. 

ನೆಲಮಂಗಲ ಬಳಿ ಇರುವ ಶಿವಕುಮಾರ ಮಹಾಸ್ವಾಮೀಜಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಎಂಜಿನಿಯರಿಂಗ್  30, ಎಂಟೆಕ್  20, ಪಾಲಿಟೆಕ್ನಿಕ್  50 ಸೀಟ್ ಒಟ್ಟು 100 ಮಕ್ಕಳಿಗೆ ವಸತಿ ಶಿಕ್ಷಣ ನೀಡಲು ಮುಂದಾಗಿದ್ದಾರೆ.

ಈ ಮೂಲಕ ಕೊಡಗು ಸಂತ್ರಸ್ತ ಕುಟುಂಬದ ಮಕ್ಕಳಿಗೆ ಶೈಕ್ಷಣಿಕವಾಗಿ‌ ನೆರವಾಗಲು ಮುಂದಾಗಿದ್ದಾರೆ. ಶಿವಕುಮಾರಸ್ವಾಮಿಗಳ ಆಶೀರ್ವಾದ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾರ್ಗರ್ಶನ ದಿಂದ ನಡೆದು ಬಂದಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಮಾಡುತ್ತಿರುವ ಜನಸೇವೆಗೆ ನಾನು ಸಹಕಾರ  ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ಚೆನ್ನಿಗಪ್ಪಾ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments