Webdunia - Bharat's app for daily news and videos

Install App

ನಾಲ್ಕೂ ನಿಗಮಗಳಲ್ಲೂ ಅಂಧರಿಗೆ ಉಚಿತವಾಗಿ ಓಡಾಡಲು ಅವಕಾಶ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

Sampriya
ಭಾನುವಾರ, 13 ಜುಲೈ 2025 (14:36 IST)
Photo Credit X
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯನ್ನು ಅಂಧ ಪ್ರಯಾಣಿಕರಿಗೂ ರಾಜ್ಯ ಸರ್ಕಾರ ವಿಸ್ತರಿಸಿದೆ. ನಾಲ್ಕು ನಿಗಮಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಇದರಿಂದ ಲಕ್ಷಾಂತರ ಅಂಧರಿಗೆ ಪ್ರಯೋಜನವಾಗಲಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದ್ದ ಸರ್ಕಾರ ಈಗ ಅಂಧತ್ವ ಹೊಂದಿರೋ ವಿಶೇಷ ಚೇತನರಿಗಾಗಿ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸಾರಿಗೆಯ 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಕಲ್ಪಿಸಿದೆ.

ನಾಲ್ಕು ನಿಗಮಗಳ ಪೈಕಿ ಯಾವ ನಿಗಮದ ಬಸ್‌ಪಾಸ್ ಇತ್ತೋ ಆ ಬಸ್‌ನಲ್ಲಿ ಮಾತ್ರ ಅಂಧತ್ವ ಇದ್ದವರು ಓಡಾಡಲು ಅವಕಾಶ ಇತ್ತು. ಇದು ಅನೇಕರಿಗೆ ಸಮಸ್ಯೆ ಕೂಡ ಆಗುತ್ತಿತ್ತು. ಅದರಲ್ಲೂ ಬೆಂಗಳೂರಿನಲ್ಲಿರೋ ಹಲವರು ಬಿಎಂಟಿಸಿ ಬಸ್‌ನಲ್ಲಿ ಓಡಾಡಲು ಅವಕಾಶ ಇದ್ದವರು ಕೆಎಸ್‌ಆರ್‌ಟಿಸಿಯಲ್ಲಿ ಓಡಾಡಬೇಕಾದ್ರೆ ಹಣ ಪಾವತಿ ಮಾಡಿಯೇ ಓಡಾಡಬೇಕಿತ್ತು. 

ಈಗ ಅಂಧರ ಅನೂಕೂಲಕ್ಕಾಗಿ ಸರ್ಕಾರ ಹೊಸ ಆದೇಶ ಮಾಡಿದೆ. ಆ ಪ್ರಕಾರ ಯಾವುದಾದರೂ 1 ನಿಗಮದ ಪಾಸ್ ಇದ್ದರೆ, 4 ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಸದ್ಯ ಈ ಬಗ್ಗೆ ಖುದ್ದು ಸಾರಿಗೆ ಸಚಿವರೇ ನಿಗಮಗಳಿಗೆ ಸೂಚಿಸಿದ್ದಾರೆ.  

ಬೆಂಗಳೂರು ನಗರ ಒಂದರಲ್ಲೇ ಸುಮಾರು 20 ಸಾವಿರಕ್ಕೂ ಹೆಚ್ಚು ಅಂಧರಿದ್ದಾರೆ. ರಾಜ್ಯವ್ಯಾಪಿ ಲಕ್ಷದಷ್ಟು ಅಂಧ ವಿಶೇಷ ಚೇತನರಿದ್ದು, ಎಲ್ಲರಿಗೂ ಸರ್ಕಾರ ಉಚಿತ ಪಾಸ್ ನೀಡುತ್ತಿದೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments