Webdunia - Bharat's app for daily news and videos

Install App

ಮದುವೆ ಆಗಿದ್ದು ಸಹಿಸದೆ ಸ್ನೇಹಿತೆಯನ್ನೇ ಹತ್ಯೆಗೈದ ಗೆಳತಿ

Webdunia
ಗುರುವಾರ, 2 ಏಪ್ರಿಲ್ 2015 (18:11 IST)
ಮದುವೆಯಾಗಿದ್ದನ್ನು ಸಹಿಸದ ಸ್ನೇಹಿತೆಯೋರ್ಳು ತನ್ನ ಸ್ನೇಹಿತೆಯನ್ನೇ ಕತ್ತು ಹಿಸುಕಿ ಹತ್ಯೆಗೈದ ಘಟನೆ ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯಲ್ಲಿ ನಡೆದಿದೆ.  
 
ಮೃತ ಸ್ನೇಹಿತೆಯನ್ನು ದಿವ್ಯಾಶ್ರೀ(23) ಎಂದು ಹೇಳಲಾಗಿದ್ದು, ಈಕೆಯನ್ನು ಸ್ನೇಹಿತೆ ಅನುಷಾ(23) ಎಂಬಾಕೆ ನಗರದ ರೇಷ್ಮೆ ಇಲಾಖೆಯ ಕಟ್ಟದ ಬಳಿ ಹತ್ಯೆಗೈದಿದ್ದಾಳೆ. ಈ ಇಬ್ಬರೂ ಕೂಡ ಹಾಲಹಳ್ಳಿ ಬಡಾವಣೆಯ ನಿವಾಸಿಗಲಾಗಿದ್ದಾರೆ. 
 
ಇನ್ನು ಪ್ರಕರಣ ಸಂಬಂಧ ಮೃತ ದಿವ್ಯಾಶ್ರೀಯ ತಂದೆ ಅನುಷಾಳ ಮೇಲೆ ಶಂಕೆ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅನುಷಾಳನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಹೌದು, 8 ತಿಂಗಳಿನಿಂದ ನನ್ನ ಜೊತೆ ಇದ್ದವಳು ನನ್ನ ಮಾತಿಗೆ ಬೆಲೆ ಕೊಡದೆ ಮದುವೆ ಮಾಡಿಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯನ್ನು ನಾನೇ ಕರೆಸಿಕೊಂಡು ಕುತ್ತಿಗೆಗೆ ವೈರ್ ಬಿಗಿದು ಹತ್ಯೆಗೈದೆ ಎಂದು ಒಪ್ಪಿಕೊಂಡಿದ್ದಾಳೆ. 
 
ಇನ್ನು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅನುಷಾಳನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments