Webdunia - Bharat's app for daily news and videos

Install App

ತಮಾಷೆಗೆ ಗುದದ್ವಾರಕ್ಕೆ ಏರ್‌ಫ್ರೆಷರ್‌ನಲ್ಲಿ ಗಾಳಿ ಬಿಟ್ಟ ಸ್ನೇಹಿತ: ಯುವಕ ಸಾವು

Sampriya
ಗುರುವಾರ, 28 ಮಾರ್ಚ್ 2024 (21:16 IST)
ಬೆಂಗಳೂರು: ಏರ್‌ ಪ್ರೆಷರ್ ಪೈಪ್‌ನಿಂದ ಗುದದ್ವಾರದೊಳಗೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯಲ್ಲಿನ ಕರುಳು ತುಂಡರಿಸಿ ಯುವಕ ಮೃತಪಟ್ಟಿರುವ ಘಟನೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ಮೃತ  ಯುವಕನನ್ನು ಆರ್. ಯೋಗೇಶ್ (24) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ 'ಸಿಎನ್‌ಎಸ್ ಕಾರ್ ಸ್ಪಾ' ಸರ್ವೀಸ್ ಮಳಿಗೆ ಕೆಲಸಗಾರ ಮುರುಳಿ ಅವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯೋಗೇಶ್ ಹಾಗೂ ಮುರುಳಿ ಹಲವು ವರ್ಷಗಳ ಸ್ನೇಹಿತರೆಂಬುದು ತನಿಖೆಯಿಂದ ಗೊತ್ತಾಗಿದೆ.   ತಮಾಷೆ ಮಾಡಲು ಹೋಗಿ ಈ ದೊಡ್ಡ ಅವಘಡ ಸಂಭವಿಸಿದೆ.

ಸ್ನೇಹಿತ ಕೆಲಸ ಮಾಡುತ್ತಿದ್ದ ಬೈಕ್ ಸರ್ವಿಸ್‌ ಮಳಿಗೆಗೆ ಯೋಗೇಶ್ ಆಗಾಗ ಹೋಗಿ ಮಾತಾಡಿಸಿಕೊಂಡು ಬರುತ್ತಿದ್ದ. 25ರಂದು ಯೋಗೇಶ್  ಬೈಕ್ ಸರ್ವೀಸ್ ಮಾಡಿಸಿಕೊಂಡು ಬರುವುದಾಗಿ ಹೋಗಿದ್ದಾನೆ.  

ಈ ವೇಳೆ ಮುರುಳಿ ಬಿಗಿದಪ್ಪಿ ಯೋಗೇಶ್ ಗುದದ್ದಾರಕ್ಕೆ ಪೈಪ್ ಹಿಡಿದಿದ್ದ: ಇದೇ ಸಂದರ್ಭದಲ್ಲಿ ಏರ್‌ ಪ್ರೆಷರ್ ಪೈಪ್‌ನಿಂದ ಗುದದ್ವಾರದೊಳಗೆ ಅತೀ ವೇಗದಲ್ಲಿ ಗಾಳಿ ನುಗ್ಗಿ, ಕರುಳು ತುಂಡರಿಸಿ, ಹೊಟ್ಟೆಯೊಳಗೆ ರಕ್ತಸ್ರಾವವಾಗಿತ್ತು.

ಯೋಗೇಶ್‌ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಏರುಪೇರು ನಿನ್ನೆ ಕೊನೆಯುಸಿರೆಳೆದಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments