Select Your Language

Notifications

webdunia
webdunia
webdunia
webdunia

ರಾಜ್ಯ ನಾಯಕರ ಭೇಟಿ, ಸಮಾಗಮ ಕಾಂಗ್ರೆಸ್, ಬಿಜೆಪಿ,ಜೆಡಿಎಸ್

ರಾಜ್ಯ ನಾಯಕರ ಭೇಟಿ, ಸಮಾಗಮ ಕಾಂಗ್ರೆಸ್, ಬಿಜೆಪಿ,ಜೆಡಿಎಸ್
ಬೆಂಗಳೂರು , ಗುರುವಾರ, 22 ಸೆಪ್ಟಂಬರ್ 2022 (15:57 IST)
ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿದ್ದು, ಈ ವೇಳೆ ಬಹಳ ಸೌಹಾರ್ದಯುತವಾಗಿ ಒಬ್ಬರನೊಬ್ಬರು ಕಾಲೆಳೆಯುತ್ತಾ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾಜಕೀಯದಲ್ಲಿ ಎಷ್ಟೇ ಕಿತ್ತಾಟ ಇದ್ದರೂ, ವೈಯಕ್ತಿಕವಾಗಿ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪ ಅವರು ಬಹಳ ಆತ್ಮೀಯರು. ಈ ಹಿನ್ನೆಲೆ ಇಂದು ಕಲಾಪಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಉಭಯ ನಾಯಕರು ಅನಿರೀಕ್ಷಿತವಾಗಿ ಭೇಟಿ ಮಾಡಿ ಮಾತನಾಡುತ್ತಿ ರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿತು. ಈ ಸಂದರ್ಭದಲ್ಲಿ ಶಾಸಕರಾದ ಹುಣಸೂರು ಮಂಜುನಾಥ್ ಅವರು ಕೂಡ ಉಪಸ್ಥಿತರಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ಪೇ ಸಿಎಂ ಪೋಸ್ಟರ್ ಐವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್