Select Your Language

Notifications

webdunia
webdunia
webdunia
webdunia

ಬಿಜೆಪಿಯಿಂದ ಸುಮಲತಾ ಕಣಕ್ಕೆ?

ಬಿಜೆಪಿಯಿಂದ ಸುಮಲತಾ ಕಣಕ್ಕೆ?
ಬೆಂಗಳೂರು , ಶುಕ್ರವಾರ, 1 ಮಾರ್ಚ್ 2019 (20:08 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಸುಮಲತಾ ಅಂಬರೀಶ್ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಣ್ಕಳಿಯುವುದಾಗಿ ಹೇಳಿರುವ ರೆಬಲ್ ಸ್ಟಾರ್ ಅಂಬರೀಶ್ ಅವರ ಪತ್ನಿ ಸುಮಲತಾ ಅವರಿಗೆ ಬಿಜೆಪಿ ಗಾಳ ಹಾಕಿದೆ. ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಿಂದ ಮಂಡ್ಯದಿಂದ ಕಣ್ಕಳಿಯಲು ಬಯಸಿದ್ದಾರೆ. ಆದರೆ ಇಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿರುವ ಸಾಧ್ಯತೆಗಳು ನಿಚ್ಚಳವಾಗಿವೆ. ಸುಮಲತಾ ಅಂಬರೀಶ್ ಅವರಿಗೆ ಟಿಕೇಟ್ ಸಿಗುವ ಸಾಧ್ಯತೆಗಳು ಕಡಿಮೆಯಿದೆ. ಹಾಗಾಗಿ ಬಿಜೆಪಿ ಸುಮಲತಾ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಮೂಲಕ ಸುಮಲತಾ ಅಂಬರೀಶ್ ಅವರನ್ನು ಪಕ್ಷಕ್ಕೆ ಕರೆತರಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲು ಒಪ್ಪದೆ ಪಕ್ಷೇತರರಾಗಿ ಕಣ್ಕಳಿಯಲು ನಿರ್ಧರಿಸಿದರೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣ್ಕಳಿಸದೆ ಸುಮಲತಾ ಅವರನ್ನೇ ಬೆಂಬಲಿಸುವ ಸಾಧ್ಯತೆಗಳಿವೆ.
ಶತಾಯ-ಗತಾಯ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ಅನ್ನು ಕಟ್ಟಿಹಾಕಲು ಬಿಜೆಪಿಯ ವರಿಷ್ಠರು ತೀರ್ಮಾನಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಗಂಡು ಶಿಶುವಿಗೆ ಆ ವೈದ್ಯ ಮಾಡಿದ್ದೇನು?