Webdunia - Bharat's app for daily news and videos

Install App

ನಂದಿಗಿರಿ ಪ್ರದಕ್ಷಿಣೆಯಿಂದ ಕೈಲಾಸ ದರ್ಶನದಷ್ಟೇ ಪುಣ್ಯ ಕಟ್ಟಿಕೊಳ್ಳಿ

Webdunia
ಸೋಮವಾರ, 29 ಜುಲೈ 2019 (16:30 IST)
ಕೈಲಾಸ ಪರ್ವತವನ್ನ ಏರಿ ಪ್ರದಕ್ಷಿಣೆ ಹಾಕೋಕೆ ಆಗದವರು ನಂದಿಯ ಪಂಚಗಿರಿಯ ಸಾಲನ್ನು  ಪ್ರದಕ್ಷಿಣೆ ಹಾಕಿದರೆ ಮುಕ್ತಿ ದೊರೆಯುತ್ತೆ ಅನ್ನೋ ನಂಬಿಕೆ ಅಚಲವಾಗಿದೆ.

ಆಷಾಢ  ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗಿರಿಗೆ ಪ್ರದಕ್ಷಿಣೆ  ಹಾಕೋಕೆ ಸಾವಿರಾರು ಭಕ್ತರು ಇಲ್ಲಿ ಜಮಾಯಿಸ್ತಾರೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ಗೌರಿಬಿದನೂರು, ಚಿಕ್ಕಬಳ್ಳಾಪುರ ಸೇರಿದಂತೆ ನೆರೆಯ ಆಂಧ್ರದಿಂದ ಬರೋ ಭಕ್ತರು ಇವತ್ತು ಐದು ಬೆಟ್ಟಗಳ ಸಾಲನ್ನು ಹೊಂದಿರುವ ನಂದಿಗಿರಿಗೆ ಪ್ರದಕ್ಷಿಣೆ ಹಾಕಿದ್ರು.

ಆ ಮೂಲಕ  ಮೂಲಕ ತಮ್ಮ ಭಕ್ತಿ ಭಾವವನ್ನು ಹರಿಸಿದ್ರು. ಕೈಲಾಸ ಪರ್ವತದಷ್ಟೇ ಪ್ರಖ್ಯಾತಿ ಹೊಂದಿರುವ ನಂದಿಯ ಭೋಗ  ನಂದೀಶ್ವರ ದೇವಾಲಯದಿಂದ ಆರಂಭವಾಗುವ ಪ್ರದಕ್ಷಿಣೆ ಸುಮಾರು 16 ಕಿ.ಮೀ ವ್ಯಾಪ್ತಿಯಲ್ಲಿ ಬೆಟ್ಟಕ್ಕೊಂದು  ಸುತ್ತು ಬರುತ್ತದೆ.

ನಂದಿ ಗ್ರಾಮದಲ್ಲಿ ಭೋಗ ನಂದೀಶ್ವರ, ಬೆಟ್ಟದ ಮೇಲೆ ಯೋಗ ನಂದೀಶ್ವರ ಹೊಂದಿದ್ದು,  ಹಾದಿ ಮಧ್ಯೆ ಸಿಗುವ ಕಣಿವೆ ಬಸವೇಶ್ವರನಿಗೆ ಪೂಜೆ ಸಲ್ಲಿಸುತ್ತಾರೆ. ನಂದಿಗಿರಿ ಪ್ರದಕ್ಷಿಣೆಗೆ ಮಕ್ಕಳಿಂದ, ಮುದುಕರವರೆಗೂ ಸಾವಿರಾರು ಭಕ್ತಾದಿಗಳು ಆಗಮಿಸಿ ಹಾಡು, ಭಜನೆ, ನೃತ್ಯದ ಮೂಲಕ  ಪ್ರದಕ್ಷಿಣೆ ಸಾಗುತ್ತದೆ. ಭಕ್ತಾದಿಗಳು ಅಲ್ಲಲ್ಲಿ ಪ್ರಸಾದದ ವ್ಯವಸ್ಥೆಯನ್ನೂ ಮಾಡಿದ್ದರು. ಸುಮಾರು 81 ವರ್ಷದ ಇತಿಹಾಸ ಈ ಪ್ರದಕ್ಷಿಣೆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments