Webdunia - Bharat's app for daily news and videos

Install App

ಹುಡುಗಿಯರ ಕಣ್ಣಿಗೆ ಕುತ್ತು ತಂದ ಸೀತಾಫಲ ಹಣ್ಣಿನ ಬೀಜ

Webdunia
ಬುಧವಾರ, 10 ಅಕ್ಟೋಬರ್ 2018 (14:17 IST)
ಕೊಪ್ಪಳ : ಸೌಂದರ್ಯಕ್ಕೆ ಮಾರು ಹೋಗಿ  ಹುಡುಗಿಯರು ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ. ಆದರೆ ಇದೀಗ  ಮಕ್ಕಳ ಸೌಂದರ್ಯವನ್ನು ಹೆಚ್ಚಿಸಲು ತಾಯಂದಿರು ಅವರ  ಕಣ್ಣಿಗೆ ಕುತ್ತುತಂದ ಘಟನೆ ಕೊಪ್ಪಳದಲ್ಲಿ ನಡೆದಿದೆ.


ಹಣವಾಳ ಗ್ರಾಮದ ಅನಿತಾ, ಹಾಗೂ ಜಂಗಮರ ಕಲ್ಗುಡಿ ಗ್ರಾಮದ ಚಾತುರ್ಯ ಕಣ್ಣಿಗೆ ಕುತ್ತು ತಂದುಕೊಂಡ ಹುಡುಗಿಯರು. ಎರಡು ಪ್ರತ್ಯೀಕ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಅನಿತಾ ಹಾಗೂ ಚಾತುರ್ಯನ ಅಮ್ಮಂದಿರು ನಮ್ಮ ಮಕ್ಕಳ ಕೂದಲು ಕಪ್ಪಾಗಿ ಆಗುತ್ತವೆ ಅಲ್ಲದೇ ತಲೆಯಲ್ಲಿ ಹೇನಿನ ಸಮಸ್ಯೆ ಇರಲ್ಲ ಎಂದು ಸೀತಾಫಲ ಹಣ್ಣಿನ ಬೀಜವನ್ನು ಮಿಕ್ಸಿಯಲ್ಲಿ ಹಾಕಿ ಅದನ್ನು ಪೇಸ್ಟ್ ಮಾಡಿ ರಾತ್ರಿ ತಲೆಗೆ ಹಚ್ಚಿದ್ದಾರೆ. ಆದರೆ ಆ ಬೀಜದ ವಿಷಭರಿತ ರಾಸಾಯನಿಕವು ಕಣ್ಣಿನ ಒಳಗೆ ಹೋಗಿ ಕಣ್ಣುಗಳು ಮಂಜು ಮಂಜಾಗಿ ಕಂಡಿವೆ.


ಇದರಿಂದ ಆತಂಕಗೊಂಡ ಪೋಷಕರು ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಿದ ವೈದ್ಯರು ಕಣ್ಣಿನ ದೋಷದಿಂದ ಇಬ್ಬರನ್ನು ಪಾರು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments