Webdunia - Bharat's app for daily news and videos

Install App

ಇಂಧನ ಬೆಲೆ ಏರಿಕೆಯಾಗಿದ್ದೆ ಅಚ್ಛೇದಿನ್ ? ಎಂದು ಕೇಳಿದ ಸಚಿವ

Webdunia
ಬುಧವಾರ, 5 ಸೆಪ್ಟಂಬರ್ 2018 (15:28 IST)
ಪ್ರಧಾನಿ ಮೋದಿ ಅಚ್ಛೆ ದಿನ್ ಅಂದಿದ್ರು, ದೇಶದಲ್ಲಿ ಪೆಟ್ರೋಲ್ ಡೀಜಲ್ ಬೆಲೆ ಗಗನಕ್ಕೇರಿದೆ. ಇದೇನಾ ಅಚ್ಛೆ ದಿನ್? ಎಂದು ಸಚಿವ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದು, ಇಂಧನ ಬೆಲೆ ಹೆಚ್ಚಾಗಿದೆ. ಆದ್ರೂ ಕೇಂದ್ರ ಸರ್ಕಾರ ಸುಮ್ಮನೆ ಕುಳಿತಿದೆ. ಮೋದಿ ಮನ್ ಕೀ ಬಾತ್ ಅಂತಿದ್ರು , ನಮಗೆ ಮನ್ ಕೀ ಬಾತ್ ಬೇಕಿಲ್ಲ ಕಾಮ್ ಕೀ ಬಾತ್ ಬೇಕು‌‌.
ಜನರಿಗೆ ಕೇಂದ್ರ ಸರ್ಕಾರದ ಆಡಳಿತ ವೈಖರಿ ಅರಿವಾಗಲಿ ಅಂತ ಸುಮ್ಮನಿದ್ದೇವೆ ಎಂದರು.

ಜನರಿಗೆ ಕೇಂದ್ರ ಸರ್ಕಾರ ಡೀಜಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ‌ ಕುರಿತು ಅರ್ಥವಾಗಬೇಕು. ನಾವು ಹಿಂದಿನಿಂದಲೂ ತೈಲ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡುತ್ತಿದ್ದೇವೆ. ಸತ್ಯ ಜನರಿಗೆ ಅರ್ಥ ಆಗಲಿ ಎಂದು ಸುಮ್ಮನಿದ್ದೇವೆ.

ಮಾತೆತ್ತಿದ್ದರೆ ಸರ್ಕಾರ ಬೀಳುತ್ತೆ ಬೀಳುತ್ತೆ ಅಂತ ಹೇಳ್ತಾನೆ ಬರ್ತಿದಾರೆ. ಮೈತ್ರಿ ಸರ್ಕಾರ ಬಿಳೋದಿಲ್ಲ,‌ ಐದು ವರ್ಷ ಆಡಳಿತ ನಡೆಸುತ್ತದೆ. ಐದು ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಘೋಷಣೆಯಾದ ಎಲ್ಲಾ ಯೋಜನೆಗಳು ಈ ಸರ್ಕಾರ ಮುಂದುವರೆಸುತ್ತೆ ಎಂದೂ ಸಚಿವ ಜಮೀರ್ ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments