Webdunia - Bharat's app for daily news and videos

Install App

ಗ್ರಾ.ಪಂ. ಸದಸ್ಯರಿಗೆ ಡಿಮ್ಯಾಂಡೋ... ಡಿಮ್ಯಾಂಡ್ !

Webdunia
ಭಾನುವಾರ, 21 ನವೆಂಬರ್ 2021 (11:59 IST)
ಮಂಡ್ಯ : ಪರಿಷತ್ ಚುನಾವಣೆಗೆ ಸಾಮಾನ್ಯ ವ್ಯಕ್ತಿಗಳು ಸ್ಪರ್ಧಿಸುವಂತಿಲ್ಲ.
ನಿಯಮದ ಪ್ರಕಾರ ಸ್ಪರ್ಧೆಗೆ ಅರ್ಹರಿದ್ದರೂ ಗೆಲ್ಲುವ ಉದ್ದೇಶವಿದ್ದವರು ಹಣವಂತರಾಗಿಬೇಕು ಇಲ್ಲವೇ ಗುಣವಂತರೆಂದು ಪಕ್ಷ ಗುರುತಿಸಿದವರಾಗಿದ್ದರೆ ಚುನಾವಣೆಯಲ್ಲಿ ಪೈಪೋಟಿ ನೀಡಬಹುದು.
ಪಕ್ಷದ ಚಿಹ್ನೆ ಇಲ್ಲದೇ ಆಯ್ಕೆಯಾದ ಗ್ರಾಮಪಂಚಾಯಿತಿ ಸದಸ್ಯರು ಯಾರಿಗೆ ಬೇಕಾದರೂ ಮತದಾನ ಮಾಡಲು ಸ್ವತಂತ್ರರು. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಇರುವ ಗ್ರಾ.ಪಂ. ಸದಸ್ಯರಿಗೆ ಡಿಮ್ಯಾಂಡ್ ಜೋರಾಗಿದೆ. ಚುನಾವಣಾ ವೆಚ್ಚದ ಬಗ್ಗೆಯೂ ಗಂಭೀರ ಚರ್ಚೆಯಾಗುತ್ತಿದೆ. ಎಲ್ಲರೂ ಗ್ರಾ.ಪಂ ಸದಸ್ಯರಾಗಿ ಯಾವುದಾದರೊಂದು ಪಕ್ಷದ ಕಾರ್ಯಕರ್ತರಾಗಿ ಗೆದ್ದಿರುತ್ತಾರೆ. ಚಿಹ್ನೆ ಇಲ್ಲದ ಕಾರಣ ವಿಪ್ ಪಡೆಯಲು ಅವಕಾಶವಿಲ್ಲ. ಇದರಿಂದ ಇಷ್ಟಬಂದವರಿಗೆ ಮತ ಚಲಾಯಿಸಬಹುದು.
ಪರಿಷತ್ಗೆ ಸ್ಪರ್ಧಿಸುವ ಆಕಾಂಕ್ಷಿಗಳು ಮತ್ತು ರಾಜಕೀಯ ಪಕ್ಷಗಳಿಗೆ 'ಚುನಾವಣಾ ಬಂಡವಾಳ'ದ ಚಿಂತೆ ಎದುರಾಗಿದೆ. ಪಕ್ಷದ ಅಧೀನಕ್ಕೆ ಒಳಪಡದ ಗ್ರಾ.ಪಂ. ಸದಸ್ಯರಿಗೆ ಆಸೆ, ಆಮಿಷ ಒಡ್ಡಿಯೇ ಸೆಳೆದುಕೊಳ್ಳಬೇಕು. ಹೀಗಾಗಿ ಅಭ್ಯರ್ಥಿಗಳು ಬಂಡವಾಳ ಭಾರೀ ಹೂಡಬೇಕಿದೆ. ಕಳೆದ ಚುನಾವಣೆಯಲ್ಲಿ ಕೆಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರಿಗೆ 25 ಸಾವಿರ, 36 ಸಾವಿರ, 63 ಸಾವಿರ ಹೀಗೆ ನಾನಾ ಹಂತದ ಮತದಾರರಿಗೆ ಒಂದೊಂದು ರೀತಿ ಹಣ ನೀಡಿದ್ದರೆಂಬ ಮಾತುಗಳು ಈಗಲೂ ಕೇಳಿ ಬರುತ್ತಿವೆ. ಜಿಲ್ಲಾ, ತಾಲೂಕು ಪಂಚಾಯಿತಿ ಸದಸ್ಯರಿಲ್ಲದಿರುವುದು ಸ್ಪಲ್ಪಮಟ್ಟಿನ ನೆಮ್ಮದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments