Webdunia - Bharat's app for daily news and videos

Install App

ಗ್ರಾ.ಪಂ. ಸದಸ್ಯರಿಗೆ ಡಿಮ್ಯಾಂಡೋ... ಡಿಮ್ಯಾಂಡ್ !

Webdunia
ಭಾನುವಾರ, 21 ನವೆಂಬರ್ 2021 (11:59 IST)
ಮಂಡ್ಯ : ಪರಿಷತ್ ಚುನಾವಣೆಗೆ ಸಾಮಾನ್ಯ ವ್ಯಕ್ತಿಗಳು ಸ್ಪರ್ಧಿಸುವಂತಿಲ್ಲ.
ನಿಯಮದ ಪ್ರಕಾರ ಸ್ಪರ್ಧೆಗೆ ಅರ್ಹರಿದ್ದರೂ ಗೆಲ್ಲುವ ಉದ್ದೇಶವಿದ್ದವರು ಹಣವಂತರಾಗಿಬೇಕು ಇಲ್ಲವೇ ಗುಣವಂತರೆಂದು ಪಕ್ಷ ಗುರುತಿಸಿದವರಾಗಿದ್ದರೆ ಚುನಾವಣೆಯಲ್ಲಿ ಪೈಪೋಟಿ ನೀಡಬಹುದು.
ಪಕ್ಷದ ಚಿಹ್ನೆ ಇಲ್ಲದೇ ಆಯ್ಕೆಯಾದ ಗ್ರಾಮಪಂಚಾಯಿತಿ ಸದಸ್ಯರು ಯಾರಿಗೆ ಬೇಕಾದರೂ ಮತದಾನ ಮಾಡಲು ಸ್ವತಂತ್ರರು. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಇರುವ ಗ್ರಾ.ಪಂ. ಸದಸ್ಯರಿಗೆ ಡಿಮ್ಯಾಂಡ್ ಜೋರಾಗಿದೆ. ಚುನಾವಣಾ ವೆಚ್ಚದ ಬಗ್ಗೆಯೂ ಗಂಭೀರ ಚರ್ಚೆಯಾಗುತ್ತಿದೆ. ಎಲ್ಲರೂ ಗ್ರಾ.ಪಂ ಸದಸ್ಯರಾಗಿ ಯಾವುದಾದರೊಂದು ಪಕ್ಷದ ಕಾರ್ಯಕರ್ತರಾಗಿ ಗೆದ್ದಿರುತ್ತಾರೆ. ಚಿಹ್ನೆ ಇಲ್ಲದ ಕಾರಣ ವಿಪ್ ಪಡೆಯಲು ಅವಕಾಶವಿಲ್ಲ. ಇದರಿಂದ ಇಷ್ಟಬಂದವರಿಗೆ ಮತ ಚಲಾಯಿಸಬಹುದು.
ಪರಿಷತ್ಗೆ ಸ್ಪರ್ಧಿಸುವ ಆಕಾಂಕ್ಷಿಗಳು ಮತ್ತು ರಾಜಕೀಯ ಪಕ್ಷಗಳಿಗೆ 'ಚುನಾವಣಾ ಬಂಡವಾಳ'ದ ಚಿಂತೆ ಎದುರಾಗಿದೆ. ಪಕ್ಷದ ಅಧೀನಕ್ಕೆ ಒಳಪಡದ ಗ್ರಾ.ಪಂ. ಸದಸ್ಯರಿಗೆ ಆಸೆ, ಆಮಿಷ ಒಡ್ಡಿಯೇ ಸೆಳೆದುಕೊಳ್ಳಬೇಕು. ಹೀಗಾಗಿ ಅಭ್ಯರ್ಥಿಗಳು ಬಂಡವಾಳ ಭಾರೀ ಹೂಡಬೇಕಿದೆ. ಕಳೆದ ಚುನಾವಣೆಯಲ್ಲಿ ಕೆಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರಿಗೆ 25 ಸಾವಿರ, 36 ಸಾವಿರ, 63 ಸಾವಿರ ಹೀಗೆ ನಾನಾ ಹಂತದ ಮತದಾರರಿಗೆ ಒಂದೊಂದು ರೀತಿ ಹಣ ನೀಡಿದ್ದರೆಂಬ ಮಾತುಗಳು ಈಗಲೂ ಕೇಳಿ ಬರುತ್ತಿವೆ. ಜಿಲ್ಲಾ, ತಾಲೂಕು ಪಂಚಾಯಿತಿ ಸದಸ್ಯರಿಲ್ಲದಿರುವುದು ಸ್ಪಲ್ಪಮಟ್ಟಿನ ನೆಮ್ಮದಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments