Webdunia - Bharat's app for daily news and videos

Install App

ಕೊರಟಗೆರೆಯಲ್ಲಿ ಜಿ.ಪರಮೇಶ್ವರ್‌ಗೆ ಮತ್ತೆ ಸೋಲು ಎಂದ ಜಿ.ಪಂ.ಸದಸ್ಯ

Webdunia
ಶುಕ್ರವಾರ, 22 ಡಿಸೆಂಬರ್ 2017 (14:25 IST)
ಕೊರಟಗೆರೆ ಹಾಗೂ ಮಧುಗಿರಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಶಾಸಕ-ಸಚಿವರಾಗಿ ಮತದಾರರಿಗೆ ವಂಚಿಸಿ ಗೋಸುಂಬೆ ನಡವಳಿಕೆ ಹೊಂದಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿಯೂ ಸೋಲು ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾ ಪಂಚಾಯತ್ ಸದಸ್ಯ ವೈ.ಎಚ್.ಹುಚ್ಚಯ್ಯ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಧುಗಿರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ಪರಮೇಶ್ವರ 2008ರಲ್ಲಿ ಕೊರಟಗೆರೆ ಮೀಸಲು ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದರು. ಆದರೆ, ಈ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಚುನಾವಣೆ ಹತ್ತಿರವಾಗಿದೆ ಎಂದು ಸಮಾವೇಶದ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದಾರೆ. ಏನೇ ಪ್ರಯತ್ನಪಟ್ಟರು ಕೂಡ ಕೊರಟಗೆರೆ ಮತದಾರ ಹಗಲು ಕಂಡ ಬಾವಿಗೆ ರಾತ್ರಿ ಬೀಳುವುದಿಲ್ಲ ಎಂದಿದ್ದಾರೆ.
 
ಇವರು ಮಂತ್ರಿಯಾಗಿದ್ದಾಗ ಮಹಿಳೆಯರ ಸಬಲೀಕರಣಕ್ಕೆ ಯಾವುದೇ ಸಹಾಯ ಮಾಡದೆ,ಮನೆಗೆ ಹೋಗುವ ಕಾಲದಲ್ಲಿ ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದಾರೆ.ಇವರ ಕಾರ್ಯ ವೈಖರಿಗೆ ಕೊರಟಗೆರೆ ಕ್ಷೇತ್ರ ಜನ ಶಾಪ ಹಾಕುತ್ತಿದ್ದಾರೆ.ಇವರು ಏನೇ ಅಬ್ಬರದ ಪ್ರಚಾರ ಮಾಡಿದರು 
 
ಸದಾಶಿವ ವರದಿಯನ್ನು ಜಾರಿಗೆ ತರಲು ಪರಮೇಶ್ವರ್ ತೀವ್ರ ವಿರೋಧ ಮಾಡಿದ್ದಾರೆ. ಸಮಾಜ ಕಲ್ಯಾಣ ಸಚಿವರಿಗೆ ಬೆದರಿಕೆ ಹಾಕಿದ್ದಾರೆ. ಬಹುಸಂಖ್ಯಾತರಿಗೆ ಅನುಕೂಲವಾಗಬಾರದು ಎಂಬುದು ಪರಮೇಶ್ವರ್ ಧೋರಣೆಯಾಗಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments