Webdunia - Bharat's app for daily news and videos

Install App

ಸಿಎಂ ಕುರ್ಚಿಗಾಗಿ ಒಳಗೊಳಗೇ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರಾ ಡಿಕೆ ಶಿವಕುಮಾರ್, ಪರಮೇಶ್ವರ್

Krishnaveni K
ಮಂಗಳವಾರ, 1 ಅಕ್ಟೋಬರ್ 2024 (10:13 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ಮುಡಾ ಹಗರಣ ಆರೋಪ ಕೇಳಿಬಂದ ಬೆನ್ನಲ್ಲೇ ನಮ್ಮ ಬೆಂಬಲ ಅವರಿಗಿದೆ ಎಂದು ಹೇಳಿದರೂ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹಸಚಿವ ಜಿ ಪರಮೇಶ್ವರ್ ಒಳಗೊಳಗೇ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರಾ ಎಂಬ ಸಂಶಯ ಮೂಡಿದೆ.

ಸಿದ್ದರಾಮಯ್ಯ ಒಂದು ವೇಳೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದರೆ ಈ ಇಬ್ಬರಲ್ಲಿ ಒಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಹೈಕಮಾಂಡ್ ಡಿಕೆ ಶಿವಕುಮಾರ್ ಗೂ ಮುಂದೆ ಸಿಎಂ ಸ್ಥಾನ ನೀಡುವ ಬಗ್ಗೆ ಭರವಸೆ ನೀಡಿ ಅವರನ್ನು ತಣ್ಣಗಾಗಿಸಿತ್ತು ಎನ್ನಲಾಗಿದೆ.

ಇನ್ನೊಂದೆಡೆ ಹಿರಿಯ ನಾಯಕ ಜಿ ಪರಮೇಶ್ವರ್ ಕೂಡಾ ಸಿಎಂ ಆಕಾಂಕ್ಷಿಯೇ. ಇಬ್ಬರೂ ನಾಯಕರು ನಿನ್ನೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಸಿಎಂ ಆಗುವ ಕನಸನ್ನು ಪರೋಕ್ಷವಾಗಿ ತೋಡಿಕೊಂಡಿದ್ದರು.

ಹೀಗಾಗಿ ಈಗ ಸಿದ್ದರಾಮಯ್ಯಗೆ ನಮ್ಮ ಬೆಂಬಲವಿದೆ ಎಂದು ಬಹಿರಂಗ ಹೇಳಿಕೆಗಳನ್ನು ಕೊಡುತ್ತಿದ್ದರೂ ಒಂದು ವೇಳೆ ತನಿಖೆ ವೇಳೆ ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಪುರಾವೆ ಸಿಕ್ಕರೆ ಅವರಿಂದ ರಾಜೀನಾಮೆ ಕೊಡಿಸಿ ಹೊಸ ಸಿಎಂ ನೇಮಕ ಮಾಡಿದರೂ ಅಚ್ಚರಿಯಿಲ್ಲ. ಹೀಗಾಗಿ ಈ ಇಬ್ಬರೂ ನಾಯಕರ ನಡೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments