ಸಿಎಂ ರೇಸ್ ಲಿಸ್ಟ್ ಗೆ ಜಿ ಪರಮೇಶ್ವರ್ ಸೇರ್ಪಡೆ: ಸುಮ್ನಿರಪ್ಪಾ ಎಂದ ಸಚಿವರು

Krishnaveni K
ಬುಧವಾರ, 11 ಸೆಪ್ಟಂಬರ್ 2024 (11:26 IST)
ತುಮಕೂರು: ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿಯಾಗಲು ಹಿರಿಯ ನಾಯಕರು ಸಾಲಾಗಿ ನಿಂತಿದ್ದಾರೆ. ಸಿಎಂ ಸ್ಥಾನಕ್ಕೆ ಒಬ್ಬೊಬ್ಬರೇ ಆಕಾಂಕ್ಷಿಗಳ ಹೆಸರು ಕೇಳಿಬರುತ್ತಿದೆ.

ಈ ಲಿಸ್ಟ್ ಗೆ ಈಗ ಜಿ ಪರಮೇಶ್ವರ್ ಹೆಸರೂ ಸೇರ್ಪಡೆಯಾಗಿದೆ. ಇಂದು ತಮ್ಮ ತವರು ಕ್ಷೇತ್ರ ತುಮಕೂರಿಗೆ ಬಂದಿದ್ದಾಗ ಗೃಹಸಚಿವ ಜಿ ಪರಮೇಶ್ವರ್ ಅಭಿಮಾನಿಗಳು ಜೈಕಾರ ಕೂಗುವಾಗ ಅವರ ಹೆಸರಿನ ಜೊತೆ ಮುಂದಿನ ಮುಖ್ಯಮಂತ್ರಿಗೆ ಜೈ ಎಂದಿದ್ದಾರೆ. ಆ ಮೂಲಕ ತಮ್ಮ ನಾಯಕ ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಆದರೆ ತಮ್ಮ ಅಭಿಮಾನಿಗಳ ಗುಂಪು ಮುಂದಿನ ಮುಖ್ಯಮಂತ್ರಿಗೆ ಜೈ ಎಂದಾಗ ಸಿಡಿಮಿಡಿಗೊಂಡ ಜಿ ಪರಮೇಶ್ವರ್ ಸುಮ್ನಿರಪ್ಪಾ ಎಂದು ಸುಮ್ಮನಾಗಿಸಿದರು. ಅಲ್ಲೇ ಇದ್ದ ಮಾಧ್ಯಮದವರು ಹೆಚ್ಚಿನ ಪ್ರಶ್ನೆ ಕೇಳಬಹುದು ಎಂದೇನೋ ಪರಮೇಶ್ವರ್ ಕಾರು ಹತ್ತಿ ಹೊರಟೇ ಬಿಟ್ಟರು.

ಅದೇನೇ ಇರಲಿ, ಕಾಂಗ್ರೆಸ್ ನಲ್ಲಿ ಈಗ ಸಿಎಂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಹೈಕಮಾಂಡ್ ಮಾತಿಗೂ ಜಗ್ಗದೇ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಈಗ ಎಐಸಿಸಿ ನಾಯಕ ರಾಹುಲ್ ಗಾಂಧಿಗೆ ರಾಜ್ಯ ನಾಯಕರ ವರ್ತನೆ ಬಗ್ಗೆ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments