Webdunia - Bharat's app for daily news and videos

Install App

ಮಳೆಗಾಲದಲ್ಲಿ ರಸ್ತೆ ಗುಂಡಿ ಬೀಳುವುದು ಸಹಜ ಬಿಡಿ: ಜಿ ಪರಮೇಶ್ವರ್

Krishnaveni K
ಶನಿವಾರ, 25 ಮೇ 2024 (12:31 IST)
ಬೆಂಗಳೂರು: ಮಳೆಗಾಲದಲ್ಲಿ ರಸ್ತೆ ಗುಂಡಿ ಬೀಳುವುದು ಸಹಜ. ಅದಕ್ಕೆಲ್ಲಾ ಬೆಂಗಳೂರನ್ನು ಬೇರೆಯವರ ಮುಂದೆ ನಗೆಪಾಟಲಿಗೀಡು ಮಾಡಬೇಡಿ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ರಸ್ತೆ ಗುಂಡಿಗಳ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಅಭಿವೃದ್ಧಿಯಾಗುತ್ತಿಲ್ಲ ಎಂಬ ವಿಚಾರವನ್ನಿಟ್ಟುಕೊಂಡು ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಈ ವೇಳೆ ಮಳೆಗಾಲದಲ್ಲಿ ರಸ್ತೆ ಗುಂಡಿಯಾಗುವುದು ಸಹಜ ಎಂದಿದ್ದಾರೆ.

ನಾವೇ ಬೆಂಗಳೂರನ್ನು ಅವಹೇಳನ ಮಾಡಬಾರದು. ಬ್ರ್ಯಾಂಡ್ ಬೆಂಗಳೂರು ಅಲ್ಲ, ಗುಂಡಿ ಬೆಂಗಳೂರು ಎಂದು ಅವಹೇಳನ ಮಾಡುವುದು ಸರಿಯಲ್ಲ. ಈ ರೀತಿ ಮಾಡಿದರೆ ಹೊರಗಿನವರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ? ನಮ್ಮನ್ನು ನಾವೇ ಲೇವಡಿ ಮಾಡಿದಂತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಎಲ್ಲರ ಕಾಲದಲ್ಲೂ ರಸ್ತೆ ಗುಂಡಿಗಳಾಗಿವೆ. ಬಿಜೆಪಿ ಕಾಲದಲ್ಲೂ ರಸ್ತೆ ಗುಂಡಿಗಳಿತ್ತು. ಮಳೆಗಾಲದಲ್ಲಿ ಇದು ಸಹಜ. ಹಾಗಂತ ಇದನ್ನೇ ದೊಡ್ಡ ವಿಚಾರ ಮಾಡಬೇಡಿ ಎಂದಿದ್ದಾರೆ. ಮಳೆಗಾಲದಲ್ಲಿ ರಸ್ತೆ ಗುಂಡಿ, ಚರಂಡಿ ಅವ್ಯವಸ್ಥೆ ಇಂತಹ ಸಮಸ್ಯೆಗಳು ಇರುತ್ತವೆ. ಅದೆಲ್ಲಾ ದೊಡ್ಡ ವಿಚಾರವಲ್ಲ. ಸರಿಪಡಿಸಿಕೊಂಡು ಹೋಗಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments