Select Your Language

Notifications

webdunia
webdunia
webdunia
webdunia

ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು: ಸತೀಶ್ ಜಾರಕಿಹೊಳಿ

ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು: ಸತೀಶ್ ಜಾರಕಿಹೊಳಿ
ಕೊಪ್ಪಳ , ಗುರುವಾರ, 11 ಮೇ 2017 (13:47 IST)
ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ನಡೆಸಿದ್ದಾರೆ.
 
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕೆಪಿಸಿಸಿ ಅದ್ಯಕ್ಷರ ಬದಲಾವಣೆ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
 
ನಾನು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಅಕಸ್ಮಿಕ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರ್ಥವಲ್ಲ ಎಂದರು. 
 
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಿಂದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆ ಬಿಡುಗಡೆ