Select Your Language

Notifications

webdunia
webdunia
webdunia
webdunia

ಜೈಲಿಗೆ ಹೋಗಿ ಬಂದ ಬಿಎಸ್‌ವೈ ಕಾಂಗ್ರೆಸ್‌ನ್ನು ಟೀಕಿಸುತ್ತಾರೆ: ಜಿ. ಪರಮೇಶ್ವರ್ ಲೇವಡಿ

ಜೈಲಿಗೆ ಹೋಗಿ ಬಂದ ಬಿಎಸ್‌ವೈ ಕಾಂಗ್ರೆಸ್‌ನ್ನು ಟೀಕಿಸುತ್ತಾರೆ: ಜಿ. ಪರಮೇಶ್ವರ್ ಲೇವಡಿ
ನಂಜನಗೂಡು , ಶನಿವಾರ, 1 ಏಪ್ರಿಲ್ 2017 (18:49 IST)
ನಂಜನಗೂಡು: ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯರದ್ದು ಭ್ರಷ್ಟ ಸರಕಾರ ಎನ್ನುತ್ತಾರೆ ಅವರಿಗೆ ಏನು ಹೇಳಬೇಕು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ.
 
 ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ಸೇರಿದಂತೆ 15 ಜನ ಬಿಜೆಪಿ ಮುಖಂಡರು ಜೈಲಿಗೆ ಹೋಗಿಬಂದವರು. ಇಂತಹವರಿಂದ ಕಾಂಗ್ರೆಸ್ ಪಕ್ಷ ಪಾಠ ಕಲಿಯಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
 
ನಂಜನಗೂಡಿನ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರದ ಆರೋಪ ಹೊರಿಸುತ್ತಾರೆ ಎಂದು ಲೇವಡಿ ಮಾಡಿದರು.
 
ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, 5 ಬಾರಿ ಸಂಸದರಾಗಿ 3.5 ವರ್ಷ ಸಚಿವರಾಗಿ ಕಾರ್ಯನಿರ್ವಹಿಸಿದ್ದೀರಿ ನಿಮಗೆ ರೈತರಿಗೆ, ದಲಿತರಿಗೆ, ಶೋಷಿತರಿಗೆ ಮನೆಕೊಡಲು ಆಗಲಿಲ್ಲವೇ?. ಕಾಂಗ್ರೆಸ್ ಪಕ್ಷದಿಂದ ಅಧಿಕಾರ ಅನುಭವಿಸಿ ಇದೀಗ ಕಾಂಗ್ರೆಸ್ ವಿರುದ್ಧ ಮಾತನಾಡಲು ನಾಚಿಕೆಯಾಗಲ್ವೇ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅಬ್ಬರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವುದು ಸುಲಭವಲ್ಲ: ಕಾಗೋಡು