Webdunia - Bharat's app for daily news and videos

Install App

ಸಚಿವರ ಪದಗ್ರಹಣ ಸಮಾರಂಭಕ್ಕೆ ಜಿ.ಪರಮೇಶ್ವರ್ ಗೈರು: ಭಿನ್ನಮತ ಸ್ಫೋಟ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (18:39 IST)
ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೈರುಹಾಜರಾಗಿರುವುದು ಹುಬ್ಬೇರಿಸುವಂತೆ ಮಾಡಿದೆ.
ನಗರದ ಸದಾಶಿವ ನಗರದ ನಿವಾಸದಲ್ಲಿಯೇ ಇರುವ ಜಿ.ಪರಮೇಶ್ವರ್ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಲು  ಸಿಎಂ ಸಿದ್ದರಾಮಯ್ಯರೊಂದಿಗೆ ಇರುವ ಭಿನ್ನಾಭಿಪ್ರಾಯ ಕಾರಣ ಎಂದು ಮೂಲಗಳು ತಿಳಿಸಿವೆ.
 
ಷಡಕ್ಷರಿಗೆ ಸಚಿವ ಸ್ಥಾನ ನೀಡುವ ಬದಲಿಗೆ ಗೀತಾ ಮಹಾದೇವ ಪ್ರಸಾದ್ ಅವರಿಗೆ ನೀಡಿರುವುದು, ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ನಿರಾಕರಿಸಿರುವ ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಪರಮೇಶ್ವರ್ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ.
 
ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಜೆ.ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡುವಂತೆ ಪರಮೇಶ್ವರ್, ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು ಎನ್ನಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಸಿಎಂ ಇಬ್ರಾಹಿಂ ಅವರಿಗೆ ನೀಡಿರುವುದು ಕೂಡಾ ಇಬ್ಬರ ನಡುವಿನ ವೈಮನಸ್ಸಿಗೆ ಕಾರಣ ಎಂದು ಅನಾಮಧೇಯ ಮೂಲಗಳ ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments