ಕಾಮುಕರಿಗೆ ಗಲ್ಲು ಫಿಕ್ಸ್ - ನಿರ್ಭಯಾ ಅತ್ಯಾಚಾರಿಗಳ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

Webdunia
ಶುಕ್ರವಾರ, 17 ಜನವರಿ 2020 (15:09 IST)
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಯ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಈ ಮೂಲಕ ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಆಗಿದೆ.
 


2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಮರಣ ದಂಡನೆ ಶಿಕ್ಷೆಯಾಗಿದ್ದು, ಇದರಲ್ಲಿ ಒಬ್ಬನಾದ ಮುಖೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಈ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ದೆಹಲಿ ಸರ್ಕಾರ ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸ್ಸು ಮಾಡಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಖೇಶ್ ಕ್ಷಮಾದಾನ ಅರ್ಜಿಯನ್ನು  ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು. ಆದರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಈ ಮೂಲಕ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ.

ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್ , ವಿನಯ್ ಶರ್ಮಾ, ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಗುಪ್ತಾ ಎಂಬ ನಾಲ್ವರು ಆರೋಪಿಗಳನ್ನು ಜನೇವರಿ 22 ರಂದು ಗಲ್ಲಿಗೇರಿಸಬೇಕಿತ್ತು. ಆದರೆ ಮುಖೇಶ್ ಕ್ಷಮಾದಾನ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಿಗದಿತ ದಿನಾಂಕದಂದು ಗಲ್ಲಿಗೇರಿಸಲಾಗುವುದಿಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments