Select Your Language

Notifications

webdunia
webdunia
webdunia
webdunia

ಗಣಪತಿ ಕೇಸ್ ಸಿಬಿಐಗೆ: ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಬಿಎಸ್‌ವೈ ಆಗ್ರಹ

ಗಣಪತಿ ಕೇಸ್ ಸಿಬಿಐಗೆ: ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಬಿಎಸ್‌ವೈ ಆಗ್ರಹ
ಬೆಂಗಳೂರು , ಮಂಗಳವಾರ, 5 ಸೆಪ್ಟಂಬರ್ 2017 (15:56 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿದ್ದರಿಂದ ಸಚಿವ ಕೆ.ಜೆ.ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸಿಬಿಐ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯಲು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಪ್ರಕರಣದ ತನಿಖೆಗೆ ಅಡ್ಡಿಯಾಗಲಿದೆ ಎಂದು ತಿಳಿಸಿದ್ದಾರೆ.
 
ಗಣಪತಿ ತಂದೆ ಸಲ್ಲಿಸಿದ್ದ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಸಚಿವ ಜಾರ್ಜ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಆದೇಶ ನೀಡಿದೆ. ಪ್ರಕರಣದಲ್ಲಿ ಉಲ್ಲೇಖವಾಗಿರುವ ಇತರ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ.
 
ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿದ ಯಡಿಯೂರಪ್ಪ, ಜಾರ್ಜ್ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಜನತೆಯ ಸಾಮರಸ್ಯ ಕೆಡಿಸಲು ಬಿಜೆಪಿ ಸಂಚು: ವಿ.ಎಸ್.ಉಗ್ರಪ್ಪ