Webdunia - Bharat's app for daily news and videos

Install App

ಗಣಪತಿ ಕೇಸ್ ಸಿಬಿಐಗೆ ವಹಿಸ್ಬೇಕು, ಸಿಎಂ ರಾಜೀನಾಮೆ ನೀಡ್ಬೇಕು: ಬಿಎಸ್‌ವೈ

Webdunia
ಗುರುವಾರ, 24 ಆಗಸ್ಟ್ 2017 (13:23 IST)
ದಿವಂಗತ ಡಿವೈಎಸ್‌ಪಿ ಗಣಪತಿ ಪ್ರಕರಣದಲ್ಲಿ ಸಾಕ್ಷ್ಯಗಳ ನಾಶ ಕುರಿತಂತೆ ಬಹಿರಂಗವಾಗಿದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಪತಿಯವರ ಸಾವಿನ ತನಿಖೆಯನ್ನು ತರಾತುರಿಯಲ್ಲಿ ಮುಗಿಸಲಾಗಿದೆ. ಸಾಕ್ಷ್ಯ ನಾಶ ಕುರಿತಂತೆ ಸರಕಾರ ಉತ್ತರ ನೀಡಬೇಕಾಗಿದೆ ಎಂದು ಗುಡುಗಿದ್ದಾರೆ.
 
ಪ್ರಕರಣದ ಸತ್ಯಾಂಶ ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣದಲ್ಲಿ ಎಸಿಬಿ, ಸಿಐಡಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಎಸಿಬಿ ಮತ್ತು ಸಿಐಡಿ ಅಧಿಕಾರಿಗಳು ಅವಸರದಲ್ಲಿಯೇ ಸಚಿವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದರು.
 
ಗಣಪತಿ ಸಾವಿನ ಪ್ರಕರಣವನ್ನು ಮುಚ್ಚಿಹಾಕಲು ಸರಕಾರ ವ್ಯವಸ್ಥಿತ ಸಂಚು ನಡೆಸಿದೆ. ಪ್ರಮುಖ ಆರೋಪಿಗಳನ್ನು ರಕ್ಷಿಸಲು ಸಾಕ್ಷ್ಯನಾಶ ಮಾಡಲಾಗಿದೆ. ಗಣಪತಿ ಸಾವಿನಲ್ಲಿ ಕೆಂಪಯ್ಯ ಪಾತ್ರ ಕಂಡುಬರುತ್ತಿದೆ. ಪ್ರಕರಣವನ್ನು ಸಂಪೂರ್ಣ ಮುಚ್ಚಿಹಾಕಲು ಸರಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments