Select Your Language

Notifications

webdunia
webdunia
webdunia
webdunia

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ನವದೆಹಲಿ , ಮಂಗಳವಾರ, 19 ಜುಲೈ 2016 (11:08 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
 
ದೆಹಲಿಯ ಸಂಸತ್ ಭವನದ ಮುಂದಿರುವ ಗಾದಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ. ನನಗೆನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.
 
ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಆಪ್ತ ಮರಿಗೌಡ ವಿರುದ್ಧ ಯಾವುದೇ ಬಾಕಿ ಪ್ರಕರಣಗಳಿಲ್ಲ: ಪೊಲೀಸ್ ವರಿಷ್ಠಾಧಿಕಾರಿ