Select Your Language

Notifications

webdunia
webdunia
webdunia
webdunia

ಗಾಂಧಿ ಜಯಂತಿ ದಿನವಾದ ನಾಳೆ ಶಾಲೆಗಳಲ್ಲಿ ಸ್ವಚ್ಛತೆ ಅರಿವು

ಗಾಂಧಿ ಜಯಂತಿ ದಿನವಾದ ನಾಳೆ ಶಾಲೆಗಳಲ್ಲಿ ಸ್ವಚ್ಛತೆ ಅರಿವು
ಬೆಂಗಳೂರು , ಬುಧವಾರ, 1 ಅಕ್ಟೋಬರ್ 2014 (15:59 IST)
ಗಾಂಧಿ ಜಯಂತಿ ದಿನವಾದ ನಾಳೆ ಕೇಂದ್ರ ಸರ್ಕಾರ ಸ್ವಚ್ಛತಾ ಆಂದೋಲನ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ.  

ನಾಳೆ ಸ್ವಚ್ಛತಾ ಭಾರತ ಆಂದೋಲನ ಹಮ್ಮಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸುತ್ತೋಲೆ ಹೊರಡಿಸಲಾಗಿದೆ. ಶಾಲೆಯ ಕೈತೋಟ, ಆವರಣ, ಕೋಣೆಗಳನ್ನು ಸ್ವಚ್ಛಗೊಳಿಸುವ ಮೂಲಕ ಅರಿವು ಮೂಡಿಸಲು ಯತ್ನಿಸಲಾಗುತ್ತಿದೆ.

ಆದರೆ ಕೆಲವು ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸ್ವಚ್ಛತೆ ಆಂದೋಲನವನ್ನು ಹೇಗೆ ನಡೆಸಬೇಕೆಂದು ಗೊತ್ತಾಗುತ್ತಿಲ್ಲ. ಸ್ವಚ್ಛತಾ ಆಂದೋಲನದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು ಸಂಪೂರ್ಣವಾಗಿ ಶಾಲೆಗೆ ಬಿಟ್ಟ ವಿಚಾರ ಎಂದು ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ. 

Share this Story:

Follow Webdunia kannada