Webdunia - Bharat's app for daily news and videos

Install App

ಗಾಂಧಿ ಜಯಂತಿ ದಿನ ನಕಲಿ ಗಾಂಧಿ ಬಗ್ಗೆ ಮಾತನಾಡುವುದಿಲ್ಲ

Webdunia
ಭಾನುವಾರ, 2 ಅಕ್ಟೋಬರ್ 2022 (15:35 IST)
ಕರ್ನಾಟಕದಲ್ಲಿ ಈಗ ಅಧಿಕಾರದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ' ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ತಿರುಗೇಟು ಕೊಟ್ಟರು.
ಗಾಂಧಿ ಜಯಂತಿಯ ದಿನದಂದು ನಕಲಿ ಗಾಂಧಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಇಡೀ ಕಾಂಗ್ರೆಸ್​ ಪಕ್ಷ ಬೇಲ್​ನಲ್ಲಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿ.ಕೆ.ಶಿವಕುಮಾರ್ ಜಾಮೀನು ಮೇಲೆ ಹೊರಗಿದ್ದಾರೆ. ಕಾಂಗ್ರೆಸ್​ ಹೈಕಮಾಂಡ್​​ಗೆ ಕರ್ನಾಟಕ ಎಟಿಎಂ ಆಗಿತ್ತು' ಎಂದು ಆಕ್ರೋಶ ವ್ಯಕ್ತಪಡಿಸಿದರು. 'ನಮ್ಮ ಮೇಲೆ ಮಾಡುತ್ತಿರುವ 40 ಪರ್ಸೆಂಟ್​ ಆರೋಪಕ್ಕೆ ನಿಮ್ಮ ಬಳಿ ದಾಖಲೆ ಇದ್ದರೆ ಕೊಡಿ, ತನಿಖೆ ಮಾಡಿಸುತ್ತೇನೆ' ಎಂದು ಮುಖ್ಯಮಂತ್ರಿ ಸವಾಲು ಹಾಕಿದರು.
 
ಚನ್ನಪಟ್ಟಣದಲ್ಲಿ ‌ಕಾಮಗಾರಿಯೊಂದರ ಶಂಕುಸ್ಥಾಪನೆ ‌ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳುತ್ತೇನೆ. ಸರ್ಕಾರದ ಕಾಮಗಾರಿಗಳ ವಿಚಾರದಲ್ಲಿ ರಾಜಕಾರಣ ಬೆರೆಸೋದು ಸರಿಯಲ್ಲ. ಇದರಲ್ಲಿ ಹಿಂಸೆಗೆ ಅವಕಾಶವಿಲ್ಲ. ಒಟ್ಟಾರೆ ಸರ್ಕಾರದ ಅನುದಾನ ಜನರಿಗೆ ಮುಟ್ಟುವುದು ಮುಖ್ಯ. ಇಂತಹ ಸಂದರ್ಭ ಬಂದಾಗ ಹಿಂದಿನ‌ ಸರ್ಕಾರಗಳು ಏನೆಲ್ಲ ಮಾಡಿವೆ ಎನ್ನುವ ಬಗ್ಗೆಯೂ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments