ಗಾಂಧಿ ಜಯಂತಿ ದಿನ ನಕಲಿ ಗಾಂಧಿ ಬಗ್ಗೆ ಮಾತನಾಡುವುದಿಲ್ಲ

Webdunia
ಭಾನುವಾರ, 2 ಅಕ್ಟೋಬರ್ 2022 (15:35 IST)
ಕರ್ನಾಟಕದಲ್ಲಿ ಈಗ ಅಧಿಕಾರದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ' ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ತಿರುಗೇಟು ಕೊಟ್ಟರು.
ಗಾಂಧಿ ಜಯಂತಿಯ ದಿನದಂದು ನಕಲಿ ಗಾಂಧಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಇಡೀ ಕಾಂಗ್ರೆಸ್​ ಪಕ್ಷ ಬೇಲ್​ನಲ್ಲಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿ.ಕೆ.ಶಿವಕುಮಾರ್ ಜಾಮೀನು ಮೇಲೆ ಹೊರಗಿದ್ದಾರೆ. ಕಾಂಗ್ರೆಸ್​ ಹೈಕಮಾಂಡ್​​ಗೆ ಕರ್ನಾಟಕ ಎಟಿಎಂ ಆಗಿತ್ತು' ಎಂದು ಆಕ್ರೋಶ ವ್ಯಕ್ತಪಡಿಸಿದರು. 'ನಮ್ಮ ಮೇಲೆ ಮಾಡುತ್ತಿರುವ 40 ಪರ್ಸೆಂಟ್​ ಆರೋಪಕ್ಕೆ ನಿಮ್ಮ ಬಳಿ ದಾಖಲೆ ಇದ್ದರೆ ಕೊಡಿ, ತನಿಖೆ ಮಾಡಿಸುತ್ತೇನೆ' ಎಂದು ಮುಖ್ಯಮಂತ್ರಿ ಸವಾಲು ಹಾಕಿದರು.
 
ಚನ್ನಪಟ್ಟಣದಲ್ಲಿ ‌ಕಾಮಗಾರಿಯೊಂದರ ಶಂಕುಸ್ಥಾಪನೆ ‌ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳುತ್ತೇನೆ. ಸರ್ಕಾರದ ಕಾಮಗಾರಿಗಳ ವಿಚಾರದಲ್ಲಿ ರಾಜಕಾರಣ ಬೆರೆಸೋದು ಸರಿಯಲ್ಲ. ಇದರಲ್ಲಿ ಹಿಂಸೆಗೆ ಅವಕಾಶವಿಲ್ಲ. ಒಟ್ಟಾರೆ ಸರ್ಕಾರದ ಅನುದಾನ ಜನರಿಗೆ ಮುಟ್ಟುವುದು ಮುಖ್ಯ. ಇಂತಹ ಸಂದರ್ಭ ಬಂದಾಗ ಹಿಂದಿನ‌ ಸರ್ಕಾರಗಳು ಏನೆಲ್ಲ ಮಾಡಿವೆ ಎನ್ನುವ ಬಗ್ಗೆಯೂ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments