ಗಣೇಶ ಮೂರ್ತಿ ಮೆರವಣಿ: ಲಾಠಿ ಬೀಸಿದ ಪೊಲೀಸರು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (14:07 IST)
ಗಣೇಶ ಮೆರವಣಿಗೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್ ನಡೆದ ಆರೋಪ ಕೇಳಿಬಂದಿದೆ.
ಹುಬ್ಬಳ್ಳಿಯ ಮಂಟೂರ ರಸ್ತೆಯ ಮ್ಯಾಗನೀಸ್ ಪ್ಲಾಟ್ ಬಳಿ ಲಾಠಿ ಚಾರ್ಜ್ ನಡೆಸಲಾಗಿದೆ. ಒಂದೂವರೆ ಘಂಟೆಯಿಂದ ಡಿಜೆ ಸೌಂಡ್ ಹಚ್ಚಿಕೊಂಡು ನಿಂತಿದ್ದ ಗಣೇಶೋತ್ಸವ ಮಂಡಳಿಯವರಿಗೆ ಮುಂದೆ ಹೋಗಿ ಹೋಗಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಆದರೆ ಪೊಲೀಸರ ಮನವಿಗೂ ಮಣಿಯದ ಮಂಡಳಿಯವರು ಮೆರವಣಿಗೆ ಮೂಲಕ ಗಣಪತಿಯನ್ನು ಮಂಟಪಕ್ಕೆ ಕರೆದೊಯ್ಯುತ್ತಿದ್ದರು.

ಮಂಟೂರ ರಸ್ತೆಯ ಮ್ಯಾಗನೀಸ್ ಪ್ಲಾಟ್ ಗೆ ತಗೆದುಕೊಂಡು ಹೋಗಲಾಗುತ್ತಿದ್ದ ವೇಳೆ, ಡಿಜೆ ಅಬ್ಬರದಿಂದ ಆಕ್ರೋಶಿತರಾದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆಯನ್ನು ನಡೆಸಲಾಯಿತು. ಮೆರವಣಿಗೆ ಅರ್ಧಕ್ಕೆ ನಿಲ್ಲಿಸಿ ಪ್ರತಿಭಟನೆ ನಡೆಸಿದರು.
ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಹೆಚ್ಚಿನ ಪೊಲೀಸ್ ಪಡೆ ಆಗಮನದೊಂದಿಗೆ ಪರಿಸ್ಥಿತಿ ಶಾಂತಗೊಂಡಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಮುಂದಿನ ಸುದ್ದಿ
Show comments