Webdunia - Bharat's app for daily news and videos

Install App

ಗಣೇಶ ಮೂರ್ತಿ ಮೆರವಣಿ: ಲಾಠಿ ಬೀಸಿದ ಪೊಲೀಸರು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (14:07 IST)
ಗಣೇಶ ಮೆರವಣಿಗೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್ ನಡೆದ ಆರೋಪ ಕೇಳಿಬಂದಿದೆ.
ಹುಬ್ಬಳ್ಳಿಯ ಮಂಟೂರ ರಸ್ತೆಯ ಮ್ಯಾಗನೀಸ್ ಪ್ಲಾಟ್ ಬಳಿ ಲಾಠಿ ಚಾರ್ಜ್ ನಡೆಸಲಾಗಿದೆ. ಒಂದೂವರೆ ಘಂಟೆಯಿಂದ ಡಿಜೆ ಸೌಂಡ್ ಹಚ್ಚಿಕೊಂಡು ನಿಂತಿದ್ದ ಗಣೇಶೋತ್ಸವ ಮಂಡಳಿಯವರಿಗೆ ಮುಂದೆ ಹೋಗಿ ಹೋಗಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಆದರೆ ಪೊಲೀಸರ ಮನವಿಗೂ ಮಣಿಯದ ಮಂಡಳಿಯವರು ಮೆರವಣಿಗೆ ಮೂಲಕ ಗಣಪತಿಯನ್ನು ಮಂಟಪಕ್ಕೆ ಕರೆದೊಯ್ಯುತ್ತಿದ್ದರು.

ಮಂಟೂರ ರಸ್ತೆಯ ಮ್ಯಾಗನೀಸ್ ಪ್ಲಾಟ್ ಗೆ ತಗೆದುಕೊಂಡು ಹೋಗಲಾಗುತ್ತಿದ್ದ ವೇಳೆ, ಡಿಜೆ ಅಬ್ಬರದಿಂದ ಆಕ್ರೋಶಿತರಾದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆಯನ್ನು ನಡೆಸಲಾಯಿತು. ಮೆರವಣಿಗೆ ಅರ್ಧಕ್ಕೆ ನಿಲ್ಲಿಸಿ ಪ್ರತಿಭಟನೆ ನಡೆಸಿದರು.
ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಹೆಚ್ಚಿನ ಪೊಲೀಸ್ ಪಡೆ ಆಗಮನದೊಂದಿಗೆ ಪರಿಸ್ಥಿತಿ ಶಾಂತಗೊಂಡಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments