Webdunia - Bharat's app for daily news and videos

Install App

ಗಣೇಶ ಹಬ್ಬದ ಆಚರಣೆ ಹಾಗೂ ಸರ್ಕಾರದ ಮಾರ್ಗಸೂಚಿಯಲ್ಲಿನ ಗೊಂದಲಗಳು

Webdunia
ಶನಿವಾರ, 11 ಸೆಪ್ಟಂಬರ್ 2021 (20:55 IST)
ಗಣೇಶ ಹಬ್ಬದ ಆಚರಣೆ ಹಾಗೂ ಸರ್ಕಾರದ ಮಾರ್ಗಸೂಚಿಯಲ್ಲಿನ ಗೊಂದಲಗಳು ಇನ್ನೂ ನಿವಾರಣೆಯಾಗಿಲ್ಲ.
ಗಣೇಶ ಮೂರ್ತಿ 3 ಅಥವಾ 5 ದಿನಕ್ಕೆ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಗಣೇಶ ಆಯೋಜಕ ಸಮಿತಿಗೆ ಎದುರಾಗಿದೆ. ಸರ್ಕಾರವು ಸ್ಪಷ್ಟವಾಗಿ 10 ದಿನದೊಳಗಾಗಿ ಗಣೇಶ ಮೂರ್ತಿ ಯನ್ನು ಬೀದಿಗಳಲ್ಲಿ ಕೂಡಿಸಬಹುದು ಎಂಬ ನಿರ್ಧಾರ ಕೈಗೊಂಡಿದೆ. ಇದರಂತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. 
ಆದರೆ, ಕೆಲ ಸ್ಥಳೀಯ ಪೊಲೀಸ್ ಠಾಣೆಗಳ ಸಿಬ್ಬಂದಿ ಗಣೇಶ ಕೂರಿಸಿದ ಜಾಗಕ್ಕೆ ಭೇಟಿ ನೀಡಿ, ಮೂರು ಇಲ್ಲವೇ ಐದು ದಿನಗಳಲ್ಲಿ ವಿಸರ್ಜಿಸಲು ಸೂಚನೆ ನೀಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಇನ್ನು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಜನರಿದ್ದಾರೆ ಎಂಬ ನೆಪಯೊಡ್ಡಿ ಬೇಗನೇ ಗಣೇಶನನ್ನು ವಿಸರ್ಜಿಸಲು ಸೂಚಿಸುತ್ತಿದ್ದಾರೆ. 
ಸರ್ಕಾರದ ಆದೇಶದಂತೆ ಕ್ರಮಕೈಗೊಳ್ಳಲಾಗುವುದು. ಸೆ. 21 ರವರೆಗೆ ಗಣೇಶ ಮೂರ್ತಿ ಕೂಡಿಸಬಹುದಾಗಿದೆ ಎಂದು ನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರಿಂದ ನೋಟಿಸ್:
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರ ನಿಯಮ ಸಡಿಲಗೊಳಿಸಿದ್ದು, ಗಣೇಶನ ಮೂರ್ತಿ ಇಂತಿಷ್ಟೇ ಎತ್ತರ ಇರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಪಾವಗಡದಲ್ಲಿ ಗಣೇಶ ಸಮಿತಿಯು ನಿಯಮ ಬಾಹಿರವಾಗಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದೆಂದು ಸ್ಥಳೀಯ ಠಾಣೆ ನೋಟಿಸ್ ನೀಡಿದೆ.
ನೋಟಿಸ್ ಗೆ ವಿಹಿಂಪ ಆಕ್ಷೇಪ: ಗಣೇಶ ಮೂರ್ತಿ ಅಳತೆ ಜಾಸ್ತಿ ಇದೆ ಎಂದು ಪೊಲೀಸ್ ನವರು ನೋಟಿಸ್ ಜಾರಿ ಮಾಡಿರುವುದನ್ನ ವಿಶ್ವ ಹಿಂದೂ ಪರಿಷದ್ ವಿರೋಧಿಸುತ್ತದೆ. ಗಣಪತಿ ಅಳತೆ ಅವರವರ ಭಕ್ತಿಗೆ ಸಂಬಂಧಿಸಿದ ವಿಚಾರ ಇದರಲ್ಲಿ ಸರ್ಕಾರ ಮೂಗು ತೂರಿಸಬಾರದು. ಈ ಸಂಬಂಧ ಪೊಲೀಸ್ ನವರು ಕೇಸ್ ದಾಖಲು ಮಾಡಿದರೆ  ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments