Webdunia - Bharat's app for daily news and videos

Install App

ಗಣೇಶ ಪ್ರತಿಷ್ಠಾಪನೆ ಮಾಡ್ತೀರಾ? ಈ ರೂಲ್ಸ್ ತಪ್ಪದೇ ಪಾಲಿಸಿ

Webdunia
ಶನಿವಾರ, 31 ಆಗಸ್ಟ್ 2019 (18:20 IST)
ಗಣೇಶ ಪ್ರತಿಷ್ಠಾಪನೆ ಮಾಡುವ ಸಾರ್ವಜನಿಕರು ನಿಯಮಗಳನ್ನು ಪಾಲಿಸಬೇಕು. ಹೀಗಂತ ಮಂಡ್ಯ ನಗರ ಪೊಲೀಸ್‌ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಂಡ್ಯ ಸೆಂಟ್ರಲ್‌ ಪೊಲೀಸ್‌ ಠಾಣೆ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪರವಾನಗಿ ಅಗತ್ಯ:
ಗಣೇಶ ಪ್ರತಿಷ್ಠಾಪನೆ ಮಾಡುವ ಸ್ಥಳಕ್ಕೆ ನಗರಸಭೆ, ಪಂಚಾಯಿತಿಯಿಂದ ಪರವಾನಿಗೆ ಪಡೆಯಬೇಕು. ಕೆಪಿಟಿಸಿಎಲ್‌ ಅಧಿಕಾರಿಗಳಿಂದ ವಿದ್ಯುತ್‌ ಪರವಾನಿಗೆ ಪಡೆದಿರಬೇಕು. ಠಾಣೆ ವ್ಯಾಪ್ತಿಯ ಸಿಪಿಐ ಅವರಿಂದ ಕಡ್ಡಾಯವಾಗಿ ಧ್ವನಿವರ್ಧಕ ಲೈಸೆಸ್ಸ್‌ ಪಡೆಯಬೇಕು. ರಾತ್ರಿ 10 ಗಂಟೆಯಿಂದ ಬೆಳಗ್ಗೆ ಜಾವ 6 ಗಂಟೆಯವರೆಗೆ ಧ್ವನಿವರ್ದಕಗಳನ್ನು ಉಪಯೋಗಿಸಬಾರದು. ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡಬಾರದು. ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾರ್ಗದ ಮಾಹಿತಿಯನ್ನು ತಿಳಿಸುವುದು.

ಬೆತ್ತಲೆ, ಅರೆಬೆತ್ತಲೆ ನೃತ್ಯಕ್ಕೆ ಅವಕಾಶವಿಲ್ಲ:
ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಘೋಷಣೆಗಳನ್ನು ಕೂಗಬಾರದು ಮತ್ತು ಬೆತ್ತಲೆ ಹಾಗೂ ಅರೆಬೆತ್ತಲೆ ನೃತ್ಯಗಳನ್ನು ಮಾಡಕೂಡದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರಚೋದನಕಾರಿ ಶಬ್ಧಗಳನ್ನು ಬಳಸಬಾರದು ಎಂದು ಹೇಳಿದ್ದಾರೆ.

ಅಗ್ನಿಶಾಮಕ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಕಡ್ಡಾಯ:
ಗಣೇಶ ಕೂರಿಸುವ ಪೆಂಡಾಲ್‌ನಲ್ಲಿ ರಾತ್ರಿ ಸಮಯದಲ್ಲಿ ವಿದ್ಯುತ್‌ ಸರಬರಾಜು ಕಡಿತವಾದಲ್ಲಿ ಪೆಟ್ರೋಮ್ಯಾಕ್ಸ್‌, ಜನರೇಟರ್‌ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಆಕಸ್ಮಿಕವಾಗಿ ಬೆಂಕಿ ಕಾಣಿಸುವ ವೇಳೆ ಬೆಂಕಿ ಆರಿಸಲು ನೀರು, ಉಸುಕು, ಸೀಸ್‌ ಫಾಯರ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಅಗ್ನಿಶಾಮಕ ಇಲಾಖೆಯಿಂದ ನಿರಪೇಕ್ಷಣಾ ಪತ್ರವನ್ನು ಪಡೆದುಕೊಂಡು ಇಟ್ಟುಕೊಂಡಿರಬೇಕು.

ಸ್ವಯಂಸೇವಕರ ನೇಮಕ ಅಗತ್ಯ:
ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ಪೆಂಡಾಲ್‌ ಹಾಕಬೇಕು. ಗಣೇಶ ಮೂರ್ತಿ ಸಂರಕ್ಷಣೆ ಕುರಿತು ಹಗಲು, ರಾತ್ರಿ ವೇಳೆ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಬೇಕು. ಗಣೇಶ ಪತ್ರಿಷ್ಠಾಪನೆ ಮಾಡಿದ ನಂತರ ವಿಸರ್ಜನೆ ಮಾಡುವವರಗೆ ಯಾವುದೇ ಆರ್ಕೆಸ್ಟ್ರಾ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡಿದರೆ ಮುಂಚಿತವಾಗಿ ಪೊಲೀಸ್‌ ಠಾಣೆಗೆ ಮಾಹಿತಿ ತಿಳಿಸುವುದು.

10 ಗಂಟೆ ತನಕ ಮಾತ್ರ ಕಾರ್ಯಕ್ರಮ:
ರಾತ್ರಿ 10 ಗಂಟೆಯೊಳಗೆ ಮುಕ್ತಾಯಗೊಳಿಸುವುದು. ಯಾವುದೇ ಅಹಿತಕರ ಘಟನೆಗಳು ಜರುಗಿದರೆ ಸಂಬಂಧಪಟ್ಟಮಂಡಳಿಯವರೇ ಜವಾಬ್ದಾರರಾಗಿರುತ್ತಾರೆ. ಗೌರಿ-ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಸಂಜೆ 7 ಗಂಟೆಯೊಳಗಿರಬೇಕು ಹಾಗೂ ಕಡ್ಡಾಯವಾಗಿ ಡಿಜೆ ಸೌಂಡ್‌ ಆಳವಡಿಕೆ ನಿಷೇಧ ಮಾಡಲಾಗಿದೆ ಎಂದು ಠಾಣೆ ಹೇಳಿಕೆಯಲ್ಲಿ ತಿಳಿಸಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments