Publish Date: Thu, 25 Aug 2022 (14:23 IST)
Updated Date: Thu, 25 Aug 2022 (17:05 IST)
ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಅನುಮತಿ ಬೇಕು ಅಂತ ಈವರೆಗೂ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.
75 ವರ್ಷಗಳ ಬಳಿಕ ಮೊದಲ ಬಾರಿಗೆ ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ನಿರ್ಧಾರ ಮಾಡಲಾಯಿತು. ಗಣರಾಜೋತ್ಸವ ಕೂಡಾ ಮಾಡುತ್ತೇವೆ. ಮುಂದೆ ಕನ್ನಡ ರಾಜ್ಯೋತ್ಸವ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು.
ಅನುಮತಿ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.