Webdunia - Bharat's app for daily news and videos

Install App

ಸಂತ್ರಸ್ಥೆ ಬಳಿ 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಮುಕರು, ಕಂಠಪೂರ್ತಿ ಕುಡಿದು ಗ್ಯಾಂಗ್ ರೇಪ್

Webdunia
ಗುರುವಾರ, 26 ಆಗಸ್ಟ್ 2021 (13:25 IST)
ಮೈಸೂರು(ಆ.26): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳ ಸುಳಿವು ಸಿಗದ ಕಾರಣ ಪೊಲೀಸರು ಮತ್ತಷ್ಟು ಸಾಕ್ಷಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಂಠಪೂರ್ತಿ ಕುಡಿದಿದ್ದ ಆರೋಪಿಗಳು
ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಆರೋಪಿಗಳು ಕಂಠಪೂರ್ತಿ ಕುಡಿದು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಅದಕ್ಕೆ ಸಾಕ್ಷಿಯಾಗಿ ಘಟನೆ ನಡೆದ ಸ್ಥಳದಲ್ಲಿ ಬಿಯರ್ ಬಾಟಲ್ಗಳು ಬಿದ್ದಿದ್ದವು. ಜೊತೆಗೆ ಕಾಮುಕರು ಕಂಠಪೂರ್ತಿ ಕುಡಿದಿದ್ದರು ಎಂದು ಸಂತ್ರಸ್ಥೆ ಹಾಗೂ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತ ಇರುವ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಸಿಸಿಟಿವಿ ದೃಶ್ಯವನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಮುಕರು
ವಿದ್ಯಾರ್ಥಿನಿಯನ್ನು ರೇಪ್ ಮಾಡಿದ ಕಾಮುಕರು ಆಕೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. ಸುಮಾರು 3 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದಕ್ಕೆ ಸಂತ್ರಸ್ಥೆ ಹಾಗೂ ಆಕೆಯ ಗೆಳೆಯ ಕೂಡ ಒಪ್ಪಿದ್ದರು. ಆದರೆ ಹಣ ಕೇಳಿ 2 ಗಂಟೆಯಾದರೂ ಸಂತ್ರಸ್ಥೆ ಹಣ ಕೊಡಲು ಸಾಧ್ಯವಾಗದಿದ್ದಾಗ, ಕಾಮುಕರು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ಕಲ್ಲಿನಿಂದ ಹೊಡೆದು ಇಬ್ಬರ ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ದೂರು ಕೊಟ್ಟರೆ ವಿಡಿಯೋ ಲೀಕ್?
ಇನ್ನು, ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು ದೂರು ಕೊಡದಂತೆ ಆಕೆಗೆ ಬೆದರಿಕೆ ಹಾಕಿದ್ದರು ಎನ್ನಲಾಗುತ್ತಿದೆ. ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು, ಪೊಲೀಸರಿಗೆ ದೂರು ಕೊಟ್ಟರೆ ರೇಪ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂಬ ಅಂಶವೂ ಬೆಳಕಿಗೆ ಬಂದಿದೆ.
ಪ್ರಾಣಾಪಾಯದಿಂದ ಪಾರಾದ ಸಂತ್ರಸ್ಥೆ
ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಹಲ್ಲೆಗೊಳಗಾಗಿದ್ದ ಸಂತ್ರಸ್ಥೆ ಹಾಗೂ ಆಕೆಯ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯಾರ್ಥಿನಿ ಮೈಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದವು. ಗೆಳೆಯನ ಮುಖ ಹಾಗೂ ತಲೆ ಮೇಲೆ ಗಾಯಗಳಾಗಿದ್ದವು. ಇಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಇಬ್ಬರೂ ಚೇತರಿಸಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಪೊಲೀಸರಿಗೆ ಹೇಳಿಕೆಯನ್ನೂ ನೀಡಿದ್ದಾರೆ  ಎಂದು ತಿಳಿದು ಬಂದಿದೆ.
ಆರೋಪಿಗಳು ನಮ್ಮಿಬ್ಬರಿಗೂ ಅಪರಿಚಿತರು. ಸುಮಾರು 4-5 ಜನ ಇದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಒಂದಷ್ಟು ಸುಳಿವು ಸಿಕ್ಕಿದ್ದು, ತನಿಖೆ ಮುಗಿಯುವವರೆಗೂ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
 ಏನಿದು ಘಟನೆ?
ನಿನ್ನೆ ಮೈಸೂರಿನ ಹೆಲಿಪ್ಯಾಡ್ ಬಳಿ ವಾಟರ್ ಟ್ಯಾಂಕ್ನ ಗುಡ್ಡದ ಬಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಘಟನೆ ಸಂಜೆ 7 ಗಂಟೆ ಸಮಯದಲ್ಲಿ ನಡೆದಿದೆ. ಯುವತಿ ತನ್ನ ಗೆಳೆಯನ ಜೊತೆ ಕುಳಿತಿದ್ದಾಗ ಸುಮಾರು 5 ಮಂದಿ ಬಂದು ಆಕೆಯ ಮೇಲೆ ಗ್ಯಾಂಗ್ ರೇಪ್ ಎಸಗಿದ್ದಾರೆ.
ರೇಪ್ ಮಾಡಿದವರು ಕೂಲಿ ಕೆಲಸದವರಂತೆ ಇದ್ದರು ಎಂದಯ ವಿದ್ಯಾರ್ಥಿನಿಯ ಸ್ನೇಹಿತ ಹೇಳಿಕೆ ಕೊಟ್ಟಿದ್ದ. ಹಲ್ಲೆ ನಡೆಸಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದೂ ಸಹ ಹೇಳಿದ್ದ. ಸಂತ್ರಸ್ಥೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಯುವತಿ ಮಹಾರಾಷ್ಟ್ರ ಮೂಲದವಳಾಗಿದ್ದು, ಮೈಸೂರಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿತ್ತು.  ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

‌Pahalgam Terror Attack:ಸರ್ವಪಕ್ಷ ಸಭೆಗೂ ಮುನ್ನಾ ರಾಷ್ಟ್ರಪತಿಯನ್ನು ಭೇಟಿಯಾದ ಅಮಿತ್ ಶಾ

Pahalgam Terror Attack: ವಾಘಾ ಅಟ್ಟಾರಿ ಗಡಿ ಬಂದ್‌ನಿಂದ ಪಾಕ್‌ನ ಮೇಲೆ ಬೀರುವ ಪರಿಣಾಮಗಳು

ಮುಂದಿನ ಸುದ್ದಿ
Show comments