Webdunia - Bharat's app for daily news and videos

Install App

ಪೊಲೀಸ ಪೇದೆಯನ್ನೇ ಅಡ್ಡಗಟ್ಟಿ ಸುಲಿಗೆ

Webdunia
ಸೋಮವಾರ, 20 ಫೆಬ್ರವರಿ 2017 (11:20 IST)
ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಮೀತಿ ಮೀರಿದೆ. ಪುಲಕೇಶಿ ನಗರ ಠಾಣೆಯ ಪೊಲೀಸ್ ಪೇದೆ ಬಸವರಾಜ್ ಇಪ್ಪರಗಿ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಸುಲಿಗೆ ಮಾಡಿ, ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 
ಬಾಣಸವಾಡಿಯ ಡಾನ್ ಬಾಸ್ಕೋ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
 
ಹೊಯ್ಸಳ ವಾಹನದ ಚಾಲಕರಾಗಿರುವ ಬಸವರಾಜ್ ನಿನ್ನೆ ಮಧ್ಯಾಹ್ನ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಅಡ್ಡಗಟ್ಟಿದ ದುರುಳರು ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಮೊಬೈಲ್‌ನ್ನು ಸಹ 
 
ಕಸಿದುಕೊಳ್ಳಲು ಯತ್ನಿಸಿದ್ದಾರೆ. ಆದರೆ ಬಸವರಾಜ್ ಪ್ರತಿರೋಧ ಒಡ್ಡಿದ್ದು, ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ.ಸ್ಥಳೀಯರು ಬಸವರಾಜ್ ಸಹಾಯಕ್ಕೆ ಬರುತ್ತಿದ್ದಂತೆ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
 
ಬಸವರಾಜ್ ಮುಖ ಮತ್ತು ದೇಹದ ಮೇಲೆ ಗಾಯಗಳಾಗಿದ್ದು ಅವರನ್ನು ಬೋರಿಂಗ್ ಆಸ್ಪತ್ರೆಗೆ ಸೇರಿಸಲಾಗಿದೆ.
 
ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments