Select Your Language

Notifications

webdunia
webdunia
webdunia
webdunia

ಮುಳುಗಡೆ ಭೀತಿ ಎದುರಿಸುತ್ತಿರುವ ಗಂಗಾವತಿ – ಕಂಪ್ಲಿ ಸೇತುವೆ

ಕಂಪ್ಲಿ-ಗಂಗಾವತಿ ಸೇತುವೆ
ಗಂಗಾವತಿ - ಕಂಪ್ಲಿಯಲ್ಲಿ ನೆರೆಹಾವಳಿ ಪ್ರದೇಶವನ್ನು ಜಿಲ್ಲಾಧಿಕಾರಿ ಡಾ.ರಾಮ್ ಪ್ರಸಾತ್ ಮನೋಹರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಕಂಪ್ಲಿ -ಗಂಗಾವತಿ ತುಂಗಭದ್ರ ನದಿಯ ಸೇತುವೆಯನ್ನು ಬಳ್ಳಾರಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರವಾಹಕ್ಕೆ ತುಂಗಾಭದ್ರಾ ನದಿ ಸೇತುವೆ ಬಲವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ತಾಂತ್ರಿಕವಾಗಿ ತುಂಗಭದ್ರಾ ನದಿ ಸೇತುವೆ ಕೊಪ್ಪಳ ಜಿಲ್ಲೆಗೆ ಸೇರಿದ್ದು, ನೂತನ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು, ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಮುಂದಾಗುತ್ತೇವೆ ಎಂದ್ರು.
ನದಿಗೆ  2ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಬಂದಿದ್ದರಿಂದ ನದಿಪಾತ್ರದ ಮನೆ, ಜಮೀನುಗಳಲ್ಲಿ ನೀರು ನುಗ್ಗಿದೆ. ಜಿಲ್ಲೆಯ ಸಿರುಗುಪ್ಪ, ಕಂಪ್ಲಿ  ಸೇರಿ ನದಿ ಪಾತ್ರದ 2220 ಹೆಕ್ಟೇರ್ ನಷ್ಟು ಜಮೀನಿನ ಬೆಳೆ ನಷ್ಟವಾಗಿದೆ. ಸಮೀಕ್ಷೆ ನಡೆಸಿ ನಷ್ಟ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಅಂತ ಡಿಸಿ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ. ಇನ್ನೂ ಹೆಚ್ಚಿನ ಪ್ರಮಾಣದ ನೀರು ಬರುವ ಸಾಧ್ಯತೆಗಳಿದ್ದು ನದಿ ಪಾತ್ರದ ಜನತೆ, ಜಾಗೃತರಾಗಿರಬೇಕು ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಮಳೆ ಹಾನಿ ಪ್ರದೇಶಕ್ಕೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಿಸುತ್ತೇನೆ ಎಂದ ಬಿಎಸ್ ವೈ