ರಾಜ್ಯ ಸರಕಾರ ಹೊಸದಾಗಿ ಸೃಷ್ಠಿಸಿರುವ ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆಗೆ, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿಯಾಗಿರುವ ಎಂ.ಎಂ ಪ್ರಸಾದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಪ್ರಸ್ತುತ, ಗುಪ್ತದಳ ಮುಖ್ಯಸ್ಥರಾಗಿದ್ದ ಎಂ.ಎಂ ಪ್ರಸಾದ್ ಅವರನ್ನು ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೆ ಸಮನಾಗಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತರ ಹುದ್ದೆಯನ್ನು ರದ್ದು ಪಡಿಸಿರುವ ರಾಜ್ಯ ಸರಕಾರ, ಹೊಸದಾಗಿ ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆ ಸೃಷ್ಠಿಮಾಡಿದೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.